ಚಾಮರಾಜನಗರ

ಹನೂರು: ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಮುಮ್ತಾಜ್ ಬಾನು ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆ

ಹನೂರು: ಹನೂರು ಪಟ್ಟಣ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದನೇ ವಾರ್ಡಿನ ಮಮ್ತಾಜ್ ಭಾನು ರವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಇವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಲಾಯಿತು.

ಉಪಾಧ್ಯಕ್ಷ ಸ್ಥಾನಕ್ಕೆ ಜಾ.ದಳದ ಎಂಟನೇ ವಾರ್ಡಿನ ಸದಸ್ಯ ಆನಂದ್ ಕುಮಾರ್ ಹಾಗೂ ಎರಡನೇ ವಾರ್ಡಿನ ಕಾಂಗ್ರೆಸ್ ಸದಸ್ಯ ಸುದೇಶ್ ರವರು ನಾಮಪತ್ರ ಸಲ್ಲಿಸಿದ್ದರು. ಆನಂದ್ ರವರಿಗೆ ಶಾಸಕ ಎಂಆರ್ ಮಂಜುನಾಥ್ ಬಿಜೆಪಿ ಸದಸ್ಯೆ ರೂಪ, ಜೆಡಿಎಸ್ ಪಕ್ಷದ 6 ಸದಸ್ಯರು ಸೇರಿದಂತೆ 8 ಎಂಟು ಮತಗಳು ಸುದೇಶ್ ರವರಿಗೆ ಕಾಂಗ್ರೆಸ್ ಪಕ್ಷದ ಐದು ಮತಗಳು ಬಿದ್ದಿದ್ದು ಮೂರು ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ. ಅಂತಿಮವಾಗಿ ಅಧ್ಯಕ್ಷರಾಗಿ ಮಮ್ತಾಜ್ ಬಾನು, ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಹಸಿಲ್ದಾರ್ ವೈ ಕೆ ಗುರುಪ್ರಸಾದ್ ಘೋಷಣೆ ಮಾಡಿದರು. ಮುಖ್ಯಾಧಿಕಾರಿ ಆರ್ ಅಶೋಕ್ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು.

ಹನೂರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದ 18 ವರ್ಷಗಳ ಬಳಿಕ ಪಟ್ಟಣ ಪಂಚಾಯಿತಿಯಲ್ಲಿ ಜಾ.ದಳ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮೊದಲ ಎರಡು ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರುಗಳೇ ಬಹುಮತ ಪಡೆದುಕೊಂಡಿದ್ದರಿಂದ ಅಧಿಕಾರ ಪಡೆದುಕೊಂಡಿತ್ತು. ಮೂರನೇ ಅವಧಿಗೆ ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷಗಳಿಗೆ ಸ್ಪಷ್ಟ ಬಹುಮತ ಬಾರದೆ ಇದ್ದಿದ್ದರಿಂದ ಮೂರನೇ ಚುನಾವಣೆಯ ಮೊದಲ ಅವಧಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಚಂದ್ರಮ್ಮ ಉಪಾಧ್ಯಕ್ಷರಾಗಿ ಹರೀಶ್ ಕುಮಾರ್ ಆಯ್ಕೆಯಾಗಿದ್ದರು.

ಎರಡನೇ ಅವಧಿಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಸದಸ್ಯರುಗಳು 7 ಶಾಸಕ ಎಂಆರ್ ಮಂಜುನಾಥ್ ಸೇರಿದಂತೆ 8 ಸದಸ್ಯರು ಇರುವುದರಿಂದ ಮೊಟ್ಟಮೊದಲ ಬಾರಿಗೆ ಪಟ್ಟಣ ಪಂಚಾಯಿತಿ ಅಧಿಕಾರವನ್ನು ಜಾ.ದಳ ಪ್ರಪ್ರಥಮ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಚುನಾವಣೆಯ ಬಳಿಕ ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿ ಹನೂರು ಪಟ್ಟಣ ಪಂಚಾಯಿತಿಯಲ್ಲಿ ಮೊಟ್ಟ ಮೊದಲ ಬಾರಿಗೆ ಮೈತ್ರಿ ಪಕ್ಷದ ಸದಸ್ಯರ ಜೊತೆಗೂಡಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದೇವೆ. ಮೊಟ್ಟ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಾದ ಮುಮ್ತಾಜ್ ಬಾನು ರವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜಾದಳ ಪಕ್ಷದಲ್ಲಿ ಎಲ್ಲಾ ಸಮಾಜದವರನ್ನು ಒಗ್ಗೂಡಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇದೇ ನಿಟ್ಟಿನಲ್ಲಿ ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕರ್ತರ ಸಂಭ್ರಮ: ಮೊಟ್ಟ ಮೊದಲ ಬಾರಿಗೆ ಹನೂರು ಪಟ್ಟಣದ ಇತಿಹಾಸದಲ್ಲಿಯೇ ಮಂಡಲ ಪಂಚಾಯಿತಿ, ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಲ್ಲಿ ಜಾದಳ ಅಧಿಕಾರ ಪಡೆದಿರಲಿಲ್ಲ, ಮೊದಲ ಬಾರಿಗೆ ಜಾದಳದ ಸದಸ್ಯರು ಪಟ್ಟಣ ಪಂಚಾಯಿತಿ ಚುಕ್ಕಾಣಿ ಅಲಂಕರಿಸಿದ ಹಿನ್ನೆಲೆ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಕಾರ್ಯಕರ್ತರು ಮುಖಂಡರುಗಳು ಪಟಾಕಿ ಸಿಡಿಸಿ ಸಂಭ್ರಮಿಸಿ ಸಿಹಿ ವಿತರಣೆ ಮಾಡಿದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

3 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

4 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

5 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

9 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

10 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

16 hours ago