Mysore
29
clear sky

Social Media

ಸೋಮವಾರ, 16 ಫೆಬ್ರವರಿ 2026
Light
Dark

ಹನೂರು: ಅಕಸ್ಮಿಕ ಬೆಂಕಿಗೆ ಒಂದು ಎಕರೆ ಬಾಳೆ ನಾಶ

ಮಹಾದೇಶ್ ಎಂ ಗೌಡ, ಹನೂರು

ಹನೂರು: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಒಂದು ಎಕರೆ ಬಾಳೆ ಬೆಳೆ ಸುಟ್ಟು ಕರಕಲಾಗಿ ಕೈ ಗೆ ಬಂದ ತುತ್ತು ಬಾಯಿಗೆ ಬಾರದಾಗಿರುವ ಘಟನೆ ಬಂಡಳ್ಳಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಜರುಗಿದೆ.

ತಾಲೂಕಿನ ಬಂಡಳ್ಳಿ ಗ್ರಾಮದ ಶಿವಮ್ಮ ಎಂಬುವವರಿಗೆ ಸೇರಿದ ಜಮೀನಿಗೆ ಬೆಂಕಿ ಬಿದ್ದು ಬಾಳೆ ನಾಶವಾಗಿದೆ.

ಶಿವಮ್ಮ ಎಂಬುವವರು ಬಂಡಳ್ಳಿ ಹೊರವಲಯದಲ್ಲಿ ಕಷ್ಟಪಟ್ಟು ಬೆಳೆದಿರುವ ಬಾಳೆ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಗೊನೆ ಬಿಟ್ಟಿರುವ ಬಾಳೆ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ.ಇದರಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾರೆ ಸಂಬಂಧಪಟ್ಟ ಅಧಿಕಾರಗಳು ಸ್ಥಳ ಪರಿಶೀಲನೆ ಮಾಡಿ ಸರ್ಕಾರದ ವತಿಯಿಂದ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.

ಲಕ್ಷಾಂತರ ರೂ. ಸಾಲ ಮಾಡಿ ಬೆಳೆದಿದ್ದ ಬಾಳೆ ಬೆಳೆ ಬೆಂಕಿಗೆ ಆಹುತಿಯಾಗಿದ್ದು ತುಂಬಲಾರದ ನಷ್ಟವಾಗಿದೆ. ಇದರಿಂದ ಈಗಾಗಲೇ ಸಾಲದ ಸುಳಿಯಲ್ಲಿ ನಲುಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

ಕಳೆದೆರಡು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಕಷ್ಟದಲ್ಲಿಯೇ ಜೀವನ ನಡೆಸುತ್ತಿದ್ದ ರೈತ ಮಹಿಳೆ ಈ ವರ್ಷವಾದರೂ ಉತ್ತಮ ಲಾಭಾಂಶ ಪಡೆಯಬಹುದು ಎಂದು ಬೆಳೆದಿದ್ದ ಬಾಳೆ ಬೆಳೆಯುವ ಬೆಂಕಿಗೆ ಆಹುತಿಯಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಆ ಮೂಲಕ ನೊಂದ ರೈತ ಮಹಿಳೆಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಗೌಡೇಗೌಡ ಒತ್ತಾಯಿಸಿದ್ದಾರೆ.

 

Tags:
error: Content is protected !!