ಮಹಾದೇಶ್ ಎಂ ಗೌಡ, ಹನೂರು
ಹನೂರು: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಒಂದು ಎಕರೆ ಬಾಳೆ ಬೆಳೆ ಸುಟ್ಟು ಕರಕಲಾಗಿ ಕೈ ಗೆ ಬಂದ ತುತ್ತು ಬಾಯಿಗೆ ಬಾರದಾಗಿರುವ ಘಟನೆ ಬಂಡಳ್ಳಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಜರುಗಿದೆ.
ತಾಲೂಕಿನ ಬಂಡಳ್ಳಿ ಗ್ರಾಮದ ಶಿವಮ್ಮ ಎಂಬುವವರಿಗೆ ಸೇರಿದ ಜಮೀನಿಗೆ ಬೆಂಕಿ ಬಿದ್ದು ಬಾಳೆ ನಾಶವಾಗಿದೆ.
ಶಿವಮ್ಮ ಎಂಬುವವರು ಬಂಡಳ್ಳಿ ಹೊರವಲಯದಲ್ಲಿ ಕಷ್ಟಪಟ್ಟು ಬೆಳೆದಿರುವ ಬಾಳೆ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಗೊನೆ ಬಿಟ್ಟಿರುವ ಬಾಳೆ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ.ಇದರಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾರೆ ಸಂಬಂಧಪಟ್ಟ ಅಧಿಕಾರಗಳು ಸ್ಥಳ ಪರಿಶೀಲನೆ ಮಾಡಿ ಸರ್ಕಾರದ ವತಿಯಿಂದ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.
ಲಕ್ಷಾಂತರ ರೂ. ಸಾಲ ಮಾಡಿ ಬೆಳೆದಿದ್ದ ಬಾಳೆ ಬೆಳೆ ಬೆಂಕಿಗೆ ಆಹುತಿಯಾಗಿದ್ದು ತುಂಬಲಾರದ ನಷ್ಟವಾಗಿದೆ. ಇದರಿಂದ ಈಗಾಗಲೇ ಸಾಲದ ಸುಳಿಯಲ್ಲಿ ನಲುಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.
ಕಳೆದೆರಡು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಕಷ್ಟದಲ್ಲಿಯೇ ಜೀವನ ನಡೆಸುತ್ತಿದ್ದ ರೈತ ಮಹಿಳೆ ಈ ವರ್ಷವಾದರೂ ಉತ್ತಮ ಲಾಭಾಂಶ ಪಡೆಯಬಹುದು ಎಂದು ಬೆಳೆದಿದ್ದ ಬಾಳೆ ಬೆಳೆಯುವ ಬೆಂಕಿಗೆ ಆಹುತಿಯಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಆ ಮೂಲಕ ನೊಂದ ರೈತ ಮಹಿಳೆಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಗೌಡೇಗೌಡ ಒತ್ತಾಯಿಸಿದ್ದಾರೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…