ಚಾಮರಾಜನಗರ

ಹನೂರು: ಅಕಸ್ಮಿಕ ಬೆಂಕಿಗೆ ಒಂದು ಎಕರೆ ಬಾಳೆ ನಾಶ

ಮಹಾದೇಶ್ ಎಂ ಗೌಡ, ಹನೂರು

ಹನೂರು: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಒಂದು ಎಕರೆ ಬಾಳೆ ಬೆಳೆ ಸುಟ್ಟು ಕರಕಲಾಗಿ ಕೈ ಗೆ ಬಂದ ತುತ್ತು ಬಾಯಿಗೆ ಬಾರದಾಗಿರುವ ಘಟನೆ ಬಂಡಳ್ಳಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಜರುಗಿದೆ.

ತಾಲೂಕಿನ ಬಂಡಳ್ಳಿ ಗ್ರಾಮದ ಶಿವಮ್ಮ ಎಂಬುವವರಿಗೆ ಸೇರಿದ ಜಮೀನಿಗೆ ಬೆಂಕಿ ಬಿದ್ದು ಬಾಳೆ ನಾಶವಾಗಿದೆ.

ಶಿವಮ್ಮ ಎಂಬುವವರು ಬಂಡಳ್ಳಿ ಹೊರವಲಯದಲ್ಲಿ ಕಷ್ಟಪಟ್ಟು ಬೆಳೆದಿರುವ ಬಾಳೆ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಗೊನೆ ಬಿಟ್ಟಿರುವ ಬಾಳೆ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ.ಇದರಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾರೆ ಸಂಬಂಧಪಟ್ಟ ಅಧಿಕಾರಗಳು ಸ್ಥಳ ಪರಿಶೀಲನೆ ಮಾಡಿ ಸರ್ಕಾರದ ವತಿಯಿಂದ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.

ಲಕ್ಷಾಂತರ ರೂ. ಸಾಲ ಮಾಡಿ ಬೆಳೆದಿದ್ದ ಬಾಳೆ ಬೆಳೆ ಬೆಂಕಿಗೆ ಆಹುತಿಯಾಗಿದ್ದು ತುಂಬಲಾರದ ನಷ್ಟವಾಗಿದೆ. ಇದರಿಂದ ಈಗಾಗಲೇ ಸಾಲದ ಸುಳಿಯಲ್ಲಿ ನಲುಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

ಕಳೆದೆರಡು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಕಷ್ಟದಲ್ಲಿಯೇ ಜೀವನ ನಡೆಸುತ್ತಿದ್ದ ರೈತ ಮಹಿಳೆ ಈ ವರ್ಷವಾದರೂ ಉತ್ತಮ ಲಾಭಾಂಶ ಪಡೆಯಬಹುದು ಎಂದು ಬೆಳೆದಿದ್ದ ಬಾಳೆ ಬೆಳೆಯುವ ಬೆಂಕಿಗೆ ಆಹುತಿಯಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಆ ಮೂಲಕ ನೊಂದ ರೈತ ಮಹಿಳೆಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಗೌಡೇಗೌಡ ಒತ್ತಾಯಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago