ಚಾಮರಾಜನಗರ

ಹನೂರು: ಅಕಸ್ಮಿಕ ಬೆಂಕಿಗೆ ಒಂದು ಎಕರೆ ಬಾಳೆ ನಾಶ

ಮಹಾದೇಶ್ ಎಂ ಗೌಡ, ಹನೂರು

ಹನೂರು: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಒಂದು ಎಕರೆ ಬಾಳೆ ಬೆಳೆ ಸುಟ್ಟು ಕರಕಲಾಗಿ ಕೈ ಗೆ ಬಂದ ತುತ್ತು ಬಾಯಿಗೆ ಬಾರದಾಗಿರುವ ಘಟನೆ ಬಂಡಳ್ಳಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಜರುಗಿದೆ.

ತಾಲೂಕಿನ ಬಂಡಳ್ಳಿ ಗ್ರಾಮದ ಶಿವಮ್ಮ ಎಂಬುವವರಿಗೆ ಸೇರಿದ ಜಮೀನಿಗೆ ಬೆಂಕಿ ಬಿದ್ದು ಬಾಳೆ ನಾಶವಾಗಿದೆ.

ಶಿವಮ್ಮ ಎಂಬುವವರು ಬಂಡಳ್ಳಿ ಹೊರವಲಯದಲ್ಲಿ ಕಷ್ಟಪಟ್ಟು ಬೆಳೆದಿರುವ ಬಾಳೆ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಗೊನೆ ಬಿಟ್ಟಿರುವ ಬಾಳೆ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ.ಇದರಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾರೆ ಸಂಬಂಧಪಟ್ಟ ಅಧಿಕಾರಗಳು ಸ್ಥಳ ಪರಿಶೀಲನೆ ಮಾಡಿ ಸರ್ಕಾರದ ವತಿಯಿಂದ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.

ಲಕ್ಷಾಂತರ ರೂ. ಸಾಲ ಮಾಡಿ ಬೆಳೆದಿದ್ದ ಬಾಳೆ ಬೆಳೆ ಬೆಂಕಿಗೆ ಆಹುತಿಯಾಗಿದ್ದು ತುಂಬಲಾರದ ನಷ್ಟವಾಗಿದೆ. ಇದರಿಂದ ಈಗಾಗಲೇ ಸಾಲದ ಸುಳಿಯಲ್ಲಿ ನಲುಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

ಕಳೆದೆರಡು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಕಷ್ಟದಲ್ಲಿಯೇ ಜೀವನ ನಡೆಸುತ್ತಿದ್ದ ರೈತ ಮಹಿಳೆ ಈ ವರ್ಷವಾದರೂ ಉತ್ತಮ ಲಾಭಾಂಶ ಪಡೆಯಬಹುದು ಎಂದು ಬೆಳೆದಿದ್ದ ಬಾಳೆ ಬೆಳೆಯುವ ಬೆಂಕಿಗೆ ಆಹುತಿಯಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಆ ಮೂಲಕ ನೊಂದ ರೈತ ಮಹಿಳೆಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಗೌಡೇಗೌಡ ಒತ್ತಾಯಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

7 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

12 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

18 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago