ಹನೂರು: ನಿರಂತರ ಕಾಡಾನೆ ದಾಳಿಯಿಂದಾಗಿ ರಾಗಿ ಫಸಲು ಹಾನಿಯಾಗಿದ್ದು, ಇತ್ತ ಬೆಳೆಯೂ ಇಲ್ಲದೇ ಅತ್ತ ಪರಿಹಾರವೂ ಇಲ್ಲದೇ ಅತಂತ್ರ ಸ್ಥಿತಿಗೆ ತಲುಪಿದ್ದೇವೆ ಎಂದು ಕೋಣನಕೆರೆ ಗ್ರಾಮದ ಕಾಳಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣನಕೆರೆ ಗ್ರಾಮದಲ್ಲಿ ಕಾಳಮ್ಮ ಬಿನ್ ಮಾದಯ್ಯ ಎಂಬುವವರು, ಪಾರಂಪರಿಕ ಅರಣ್ಯವಾಸಿ ಕಾಯ್ದೆ ಅಡಿಯಲ್ಲಿ ತಮಗೆ ಸರ್ಕಾರ ನೀಡಿರುವ 1.17 ಎಕರೆ ಜಮೀನಿನಲ್ಲಿ ರಾಗಿ ಬೆಳೆ ಬೆಳೆದಿದ್ದರು. ಇದೀಗ ಕಳೆದ ಎರಡು ದಿನಗಳಿಂದಲೂ ಸಹ ನಿರಂತರವಾಗಿ ಕಾಡಾನೆ ದಾಳಿ ಮಾಡುತ್ತಿದ್ದು, ಬೆಳೆ ನಾಶವಾಗುತ್ತಿದೆ ಎಂದು ರೈತ ಮಹಿಳೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಕೋಣನಕೆರೆ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದಲೂ ಸಹ ನಿರಂತರವಾಗಿ ಕಾಡಾನೆಗಳು ಜಮೀನಿಗೆ ನುಗ್ಗಿ ಬೆಳೆಗಳನ್ನು ತಿಂದು ತೇಗಿ, ಜೊತೆಗೆ ತುಳಿದು ಹಾಳು ಮಾಡುತ್ತಿದ್ದು ಬೆಳೆ ರೈತನ ಕೈ ಸೇರದೆ ಕೈಗೆ ಬಂದ ತುತ್ತು ಬಾಯಿಗೆ ಬಾರದಾಗಿದೆ. ಇದರಿಂದ ರೈತ ಮಹಿಳೆ ಸಾಲದ ಸುಳಿಯಲ್ಲಿ ಸಿಲುಕಿ ಸಾಲ ತೀರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿ ಕಂಗಾಲಾಗಿದ್ದಾರೆ. ಜೊತೆಗೆ ನಿರಂತರ ದಾಳಿಯಿಂದ ಬೇಸತ್ತು ವ್ಯವಸಾಯ ಮಾಡುವುದನ್ನೇ ನಿಲ್ಲಿಸಿ ಬಿಡಬೇಕು ಎಂಬಂತಾಗಿದೆ ಎಂದು ಅಸಹಾಯಕತೆ ತೋಡಿಕೊಂಡಿದ್ದಾರೆ.
ಆದಿವಾಸಿ ಸಮುದಾಯಕ್ಕೆ ನೀಡಿರುವ ಜಮೀನುಗಳಿಗೆ ಕೇವಲ ಹಕ್ಕು ಪತ್ರಗಳನ್ನು ಮಾತ್ರ ನೀಡಿದ್ದು, ಹಕ್ಕು ಪತ್ರಗಳನ್ನ ನೀಡಿದರೆ ಸರ್ಕಾರ ಅಥವಾ ಸಂಬಂಧಪಟ್ಟ ಅರಣ್ಯ ಇಲಾಖೆ ಬೆಳೆ ಪರಿಹಾರವನ್ನು ನೀಡುವುದಿಲ್ಲ. ಬದಲಿಗೆ ಸೂಕ್ತ ದಾಖಲಾತಿಗಳನ್ನು ಒದಗಿಸಿ ಎಂದು ಹೇಳುತ್ತಾರೆ. ಆದರೆ ಅರಣ್ಯ ವಾಸಿ ಕಾಯ್ದೆ ಅಡಿಯಲ್ಲಿ ನಮಗೆ ನೀಡಿರುವ ಜಮೀನುಗಳಿಗೆ ಕೇವಲ ಹಕ್ಕು ಪಾತ್ರಗಳನ್ನು ಮಾತ್ರ ನೀಡಿದ್ದು, ಉಳಿದಂತೆ ಯಾವುದೇ ಪಹಣಿ ದಾಖಲಾತಿಗಳು ನಮ್ಮಲ್ಲಿ ಇರುವುದಿಲ್ಲ. ಹಾಗಾಗಿ ನಮಗೆ ಪರಿಹಾರದ ರೂಪದಲ್ಲಿ ಸಹ ಹಣ ಕೈ ಸೇರುತ್ತಿಲ್ಲ. ಹಾಗಾಗಿ ನಮಗೆ ಆನೆ ದಾಳಿಯಿಂದ ನುಂಗಲಾರದ ತುತ್ತಾಗಿದೆ ಎಂದು ಕೋಣನಕೆರೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದಿವಾಸಿ ಸಮುದಾಯದ ಜನರು ಬದುಕುತ್ತಿರುವ ಪ್ರದೇಶಗಳಲ್ಲಿ ಕಾಡಾನೆ ಅಥವಾ ಕಾಡು ಪ್ರಾಣಿಗಳಿಂದ ಬೆಳೆಗಳಿಗೆ ಹಾನಿಯಾದರೆ ಅದಕ್ಕೆ ತಕ್ಕಂತೆ ಪರಿಹಾರ ಸಿಗುತ್ತಿಲ್ಲ. ಹಾಗಾಗಿ ಕಾಡುಪ್ರಾಣಿಗಳ ಉಪಟಳದಿಂದ ಬೆಳೆಯನ್ನು ರಕ್ಷಿಸಬೇಕು. ದವಸ ಧಾನ್ಯಗಳನ್ನ ಬೆಳೆಯಲು ಅನುಕೂಲ ಕಲ್ಪಿಸಬೇಕು ಎಂದು ಸೋಲಿಗ ಸಮುದಾಯದ ಮುಖಂಡ ಮುತ್ತಯ್ಯ ಆಗ್ರಹಿಸಿದ್ದಾರೆ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…