ಚಾಮರಾಜನಗರ

ಹನೂರು| ನಿರಂತರ ಕಾಡಾನೆ ದಾಳಿಯಿಂದ ರಾಗಿ ಬೆಳೆ ನಾಶ: ಕಂಗಾಲಾದ ಜನರು

ಹನೂರು: ನಿರಂತರ ಕಾಡಾನೆ ದಾಳಿಯಿಂದಾಗಿ ರಾಗಿ ಫಸಲು ಹಾನಿಯಾಗಿದ್ದು, ಇತ್ತ ಬೆಳೆಯೂ ಇಲ್ಲದೇ ಅತ್ತ ಪರಿಹಾರವೂ ಇಲ್ಲದೇ ಅತಂತ್ರ ಸ್ಥಿತಿಗೆ ತಲುಪಿದ್ದೇವೆ ಎಂದು ಕೋಣನಕೆರೆ ಗ್ರಾಮದ ಕಾಳಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣನಕೆರೆ ಗ್ರಾಮದಲ್ಲಿ ಕಾಳಮ್ಮ ಬಿನ್ ಮಾದಯ್ಯ ಎಂಬುವವರು, ಪಾರಂಪರಿಕ ಅರಣ್ಯವಾಸಿ ಕಾಯ್ದೆ ಅಡಿಯಲ್ಲಿ ತಮಗೆ ಸರ್ಕಾರ ನೀಡಿರುವ 1.17 ಎಕರೆ ಜಮೀನಿನಲ್ಲಿ ರಾಗಿ ಬೆಳೆ ಬೆಳೆದಿದ್ದರು. ಇದೀಗ ಕಳೆದ ಎರಡು ದಿನಗಳಿಂದಲೂ ಸಹ ನಿರಂತರವಾಗಿ ಕಾಡಾನೆ ದಾಳಿ ಮಾಡುತ್ತಿದ್ದು, ಬೆಳೆ ನಾಶವಾಗುತ್ತಿದೆ ಎಂದು ರೈತ ಮಹಿಳೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಕೋಣನಕೆರೆ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದಲೂ ಸಹ ನಿರಂತರವಾಗಿ ಕಾಡಾನೆಗಳು ಜಮೀನಿಗೆ ನುಗ್ಗಿ ಬೆಳೆಗಳನ್ನು ತಿಂದು ತೇಗಿ, ಜೊತೆಗೆ ತುಳಿದು ಹಾಳು ಮಾಡುತ್ತಿದ್ದು ಬೆಳೆ ರೈತನ ಕೈ ಸೇರದೆ ಕೈಗೆ ಬಂದ ತುತ್ತು ಬಾಯಿಗೆ ಬಾರದಾಗಿದೆ. ಇದರಿಂದ ರೈತ ಮಹಿಳೆ ಸಾಲದ ಸುಳಿಯಲ್ಲಿ ಸಿಲುಕಿ ಸಾಲ ತೀರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿ ಕಂಗಾಲಾಗಿದ್ದಾರೆ. ಜೊತೆಗೆ ನಿರಂತರ ದಾಳಿಯಿಂದ ಬೇಸತ್ತು ವ್ಯವಸಾಯ ಮಾಡುವುದನ್ನೇ ನಿಲ್ಲಿಸಿ ಬಿಡಬೇಕು ಎಂಬಂತಾಗಿದೆ ಎಂದು ಅಸಹಾಯಕತೆ ತೋಡಿಕೊಂಡಿದ್ದಾರೆ.

ಆದಿವಾಸಿ ಸಮುದಾಯಕ್ಕೆ ನೀಡಿರುವ ಜಮೀನುಗಳಿಗೆ ಕೇವಲ ಹಕ್ಕು ಪತ್ರಗಳನ್ನು ಮಾತ್ರ ನೀಡಿದ್ದು, ಹಕ್ಕು ಪತ್ರಗಳನ್ನ ನೀಡಿದರೆ ಸರ್ಕಾರ ಅಥವಾ ಸಂಬಂಧಪಟ್ಟ ಅರಣ್ಯ ಇಲಾಖೆ ಬೆಳೆ ಪರಿಹಾರವನ್ನು ನೀಡುವುದಿಲ್ಲ. ಬದಲಿಗೆ ಸೂಕ್ತ ದಾಖಲಾತಿಗಳನ್ನು ಒದಗಿಸಿ ಎಂದು ಹೇಳುತ್ತಾರೆ. ಆದರೆ ಅರಣ್ಯ ವಾಸಿ ಕಾಯ್ದೆ ಅಡಿಯಲ್ಲಿ ನಮಗೆ ನೀಡಿರುವ ಜಮೀನುಗಳಿಗೆ ಕೇವಲ ಹಕ್ಕು ಪಾತ್ರಗಳನ್ನು ಮಾತ್ರ ನೀಡಿದ್ದು, ಉಳಿದಂತೆ ಯಾವುದೇ ಪಹಣಿ ದಾಖಲಾತಿಗಳು ನಮ್ಮಲ್ಲಿ ಇರುವುದಿಲ್ಲ. ಹಾಗಾಗಿ ನಮಗೆ ಪರಿಹಾರದ ರೂಪದಲ್ಲಿ ಸಹ ಹಣ ಕೈ ಸೇರುತ್ತಿಲ್ಲ. ಹಾಗಾಗಿ ನಮಗೆ ಆನೆ ದಾಳಿಯಿಂದ ನುಂಗಲಾರದ ತುತ್ತಾಗಿದೆ ಎಂದು ಕೋಣನಕೆರೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದಿವಾಸಿ ಸಮುದಾಯದ ಜನರು ಬದುಕುತ್ತಿರುವ ಪ್ರದೇಶಗಳಲ್ಲಿ ಕಾಡಾನೆ ಅಥವಾ ಕಾಡು ಪ್ರಾಣಿಗಳಿಂದ ಬೆಳೆಗಳಿಗೆ ಹಾನಿಯಾದರೆ ಅದಕ್ಕೆ ತಕ್ಕಂತೆ ಪರಿಹಾರ ಸಿಗುತ್ತಿಲ್ಲ. ಹಾಗಾಗಿ ಕಾಡುಪ್ರಾಣಿಗಳ ಉಪಟಳದಿಂದ ಬೆಳೆಯನ್ನು ರಕ್ಷಿಸಬೇಕು. ದವಸ ಧಾನ್ಯಗಳನ್ನ ಬೆಳೆಯಲು ಅನುಕೂಲ ಕಲ್ಪಿಸಬೇಕು ಎಂದು ಸೋಲಿಗ ಸಮುದಾಯದ ಮುಖಂಡ ಮುತ್ತಯ್ಯ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

8 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

8 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

11 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

12 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

13 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

13 hours ago