ಚಾಮರಾಜನಗರ

ಹನೂರು| ನಿರಂತರ ಕಾಡಾನೆ ದಾಳಿಯಿಂದ ರಾಗಿ ಬೆಳೆ ನಾಶ: ಕಂಗಾಲಾದ ಜನರು

ಹನೂರು: ನಿರಂತರ ಕಾಡಾನೆ ದಾಳಿಯಿಂದಾಗಿ ರಾಗಿ ಫಸಲು ಹಾನಿಯಾಗಿದ್ದು, ಇತ್ತ ಬೆಳೆಯೂ ಇಲ್ಲದೇ ಅತ್ತ ಪರಿಹಾರವೂ ಇಲ್ಲದೇ ಅತಂತ್ರ ಸ್ಥಿತಿಗೆ ತಲುಪಿದ್ದೇವೆ ಎಂದು ಕೋಣನಕೆರೆ ಗ್ರಾಮದ ಕಾಳಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣನಕೆರೆ ಗ್ರಾಮದಲ್ಲಿ ಕಾಳಮ್ಮ ಬಿನ್ ಮಾದಯ್ಯ ಎಂಬುವವರು, ಪಾರಂಪರಿಕ ಅರಣ್ಯವಾಸಿ ಕಾಯ್ದೆ ಅಡಿಯಲ್ಲಿ ತಮಗೆ ಸರ್ಕಾರ ನೀಡಿರುವ 1.17 ಎಕರೆ ಜಮೀನಿನಲ್ಲಿ ರಾಗಿ ಬೆಳೆ ಬೆಳೆದಿದ್ದರು. ಇದೀಗ ಕಳೆದ ಎರಡು ದಿನಗಳಿಂದಲೂ ಸಹ ನಿರಂತರವಾಗಿ ಕಾಡಾನೆ ದಾಳಿ ಮಾಡುತ್ತಿದ್ದು, ಬೆಳೆ ನಾಶವಾಗುತ್ತಿದೆ ಎಂದು ರೈತ ಮಹಿಳೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಕೋಣನಕೆರೆ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದಲೂ ಸಹ ನಿರಂತರವಾಗಿ ಕಾಡಾನೆಗಳು ಜಮೀನಿಗೆ ನುಗ್ಗಿ ಬೆಳೆಗಳನ್ನು ತಿಂದು ತೇಗಿ, ಜೊತೆಗೆ ತುಳಿದು ಹಾಳು ಮಾಡುತ್ತಿದ್ದು ಬೆಳೆ ರೈತನ ಕೈ ಸೇರದೆ ಕೈಗೆ ಬಂದ ತುತ್ತು ಬಾಯಿಗೆ ಬಾರದಾಗಿದೆ. ಇದರಿಂದ ರೈತ ಮಹಿಳೆ ಸಾಲದ ಸುಳಿಯಲ್ಲಿ ಸಿಲುಕಿ ಸಾಲ ತೀರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿ ಕಂಗಾಲಾಗಿದ್ದಾರೆ. ಜೊತೆಗೆ ನಿರಂತರ ದಾಳಿಯಿಂದ ಬೇಸತ್ತು ವ್ಯವಸಾಯ ಮಾಡುವುದನ್ನೇ ನಿಲ್ಲಿಸಿ ಬಿಡಬೇಕು ಎಂಬಂತಾಗಿದೆ ಎಂದು ಅಸಹಾಯಕತೆ ತೋಡಿಕೊಂಡಿದ್ದಾರೆ.

ಆದಿವಾಸಿ ಸಮುದಾಯಕ್ಕೆ ನೀಡಿರುವ ಜಮೀನುಗಳಿಗೆ ಕೇವಲ ಹಕ್ಕು ಪತ್ರಗಳನ್ನು ಮಾತ್ರ ನೀಡಿದ್ದು, ಹಕ್ಕು ಪತ್ರಗಳನ್ನ ನೀಡಿದರೆ ಸರ್ಕಾರ ಅಥವಾ ಸಂಬಂಧಪಟ್ಟ ಅರಣ್ಯ ಇಲಾಖೆ ಬೆಳೆ ಪರಿಹಾರವನ್ನು ನೀಡುವುದಿಲ್ಲ. ಬದಲಿಗೆ ಸೂಕ್ತ ದಾಖಲಾತಿಗಳನ್ನು ಒದಗಿಸಿ ಎಂದು ಹೇಳುತ್ತಾರೆ. ಆದರೆ ಅರಣ್ಯ ವಾಸಿ ಕಾಯ್ದೆ ಅಡಿಯಲ್ಲಿ ನಮಗೆ ನೀಡಿರುವ ಜಮೀನುಗಳಿಗೆ ಕೇವಲ ಹಕ್ಕು ಪಾತ್ರಗಳನ್ನು ಮಾತ್ರ ನೀಡಿದ್ದು, ಉಳಿದಂತೆ ಯಾವುದೇ ಪಹಣಿ ದಾಖಲಾತಿಗಳು ನಮ್ಮಲ್ಲಿ ಇರುವುದಿಲ್ಲ. ಹಾಗಾಗಿ ನಮಗೆ ಪರಿಹಾರದ ರೂಪದಲ್ಲಿ ಸಹ ಹಣ ಕೈ ಸೇರುತ್ತಿಲ್ಲ. ಹಾಗಾಗಿ ನಮಗೆ ಆನೆ ದಾಳಿಯಿಂದ ನುಂಗಲಾರದ ತುತ್ತಾಗಿದೆ ಎಂದು ಕೋಣನಕೆರೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದಿವಾಸಿ ಸಮುದಾಯದ ಜನರು ಬದುಕುತ್ತಿರುವ ಪ್ರದೇಶಗಳಲ್ಲಿ ಕಾಡಾನೆ ಅಥವಾ ಕಾಡು ಪ್ರಾಣಿಗಳಿಂದ ಬೆಳೆಗಳಿಗೆ ಹಾನಿಯಾದರೆ ಅದಕ್ಕೆ ತಕ್ಕಂತೆ ಪರಿಹಾರ ಸಿಗುತ್ತಿಲ್ಲ. ಹಾಗಾಗಿ ಕಾಡುಪ್ರಾಣಿಗಳ ಉಪಟಳದಿಂದ ಬೆಳೆಯನ್ನು ರಕ್ಷಿಸಬೇಕು. ದವಸ ಧಾನ್ಯಗಳನ್ನ ಬೆಳೆಯಲು ಅನುಕೂಲ ಕಲ್ಪಿಸಬೇಕು ಎಂದು ಸೋಲಿಗ ಸಮುದಾಯದ ಮುಖಂಡ ಮುತ್ತಯ್ಯ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

34 mins ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

1 hour ago

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

5 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

5 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

5 hours ago