ಹನೂರು: ನಿರಂತರ ಕಾಡಾನೆ ದಾಳಿಯಿಂದಾಗಿ ರಾಗಿ ಫಸಲು ಹಾನಿಯಾಗಿದ್ದು, ಇತ್ತ ಬೆಳೆಯೂ ಇಲ್ಲದೇ ಅತ್ತ ಪರಿಹಾರವೂ ಇಲ್ಲದೇ ಅತಂತ್ರ ಸ್ಥಿತಿಗೆ ತಲುಪಿದ್ದೇವೆ ಎಂದು ಕೋಣನಕೆರೆ ಗ್ರಾಮದ ಕಾಳಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣನಕೆರೆ ಗ್ರಾಮದಲ್ಲಿ ಕಾಳಮ್ಮ ಬಿನ್ ಮಾದಯ್ಯ ಎಂಬುವವರು, ಪಾರಂಪರಿಕ ಅರಣ್ಯವಾಸಿ ಕಾಯ್ದೆ ಅಡಿಯಲ್ಲಿ ತಮಗೆ ಸರ್ಕಾರ ನೀಡಿರುವ 1.17 ಎಕರೆ ಜಮೀನಿನಲ್ಲಿ ರಾಗಿ ಬೆಳೆ ಬೆಳೆದಿದ್ದರು. ಇದೀಗ ಕಳೆದ ಎರಡು ದಿನಗಳಿಂದಲೂ ಸಹ ನಿರಂತರವಾಗಿ ಕಾಡಾನೆ ದಾಳಿ ಮಾಡುತ್ತಿದ್ದು, ಬೆಳೆ ನಾಶವಾಗುತ್ತಿದೆ ಎಂದು ರೈತ ಮಹಿಳೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಕೋಣನಕೆರೆ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದಲೂ ಸಹ ನಿರಂತರವಾಗಿ ಕಾಡಾನೆಗಳು ಜಮೀನಿಗೆ ನುಗ್ಗಿ ಬೆಳೆಗಳನ್ನು ತಿಂದು ತೇಗಿ, ಜೊತೆಗೆ ತುಳಿದು ಹಾಳು ಮಾಡುತ್ತಿದ್ದು ಬೆಳೆ ರೈತನ ಕೈ ಸೇರದೆ ಕೈಗೆ ಬಂದ ತುತ್ತು ಬಾಯಿಗೆ ಬಾರದಾಗಿದೆ. ಇದರಿಂದ ರೈತ ಮಹಿಳೆ ಸಾಲದ ಸುಳಿಯಲ್ಲಿ ಸಿಲುಕಿ ಸಾಲ ತೀರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿ ಕಂಗಾಲಾಗಿದ್ದಾರೆ. ಜೊತೆಗೆ ನಿರಂತರ ದಾಳಿಯಿಂದ ಬೇಸತ್ತು ವ್ಯವಸಾಯ ಮಾಡುವುದನ್ನೇ ನಿಲ್ಲಿಸಿ ಬಿಡಬೇಕು ಎಂಬಂತಾಗಿದೆ ಎಂದು ಅಸಹಾಯಕತೆ ತೋಡಿಕೊಂಡಿದ್ದಾರೆ.
ಆದಿವಾಸಿ ಸಮುದಾಯಕ್ಕೆ ನೀಡಿರುವ ಜಮೀನುಗಳಿಗೆ ಕೇವಲ ಹಕ್ಕು ಪತ್ರಗಳನ್ನು ಮಾತ್ರ ನೀಡಿದ್ದು, ಹಕ್ಕು ಪತ್ರಗಳನ್ನ ನೀಡಿದರೆ ಸರ್ಕಾರ ಅಥವಾ ಸಂಬಂಧಪಟ್ಟ ಅರಣ್ಯ ಇಲಾಖೆ ಬೆಳೆ ಪರಿಹಾರವನ್ನು ನೀಡುವುದಿಲ್ಲ. ಬದಲಿಗೆ ಸೂಕ್ತ ದಾಖಲಾತಿಗಳನ್ನು ಒದಗಿಸಿ ಎಂದು ಹೇಳುತ್ತಾರೆ. ಆದರೆ ಅರಣ್ಯ ವಾಸಿ ಕಾಯ್ದೆ ಅಡಿಯಲ್ಲಿ ನಮಗೆ ನೀಡಿರುವ ಜಮೀನುಗಳಿಗೆ ಕೇವಲ ಹಕ್ಕು ಪಾತ್ರಗಳನ್ನು ಮಾತ್ರ ನೀಡಿದ್ದು, ಉಳಿದಂತೆ ಯಾವುದೇ ಪಹಣಿ ದಾಖಲಾತಿಗಳು ನಮ್ಮಲ್ಲಿ ಇರುವುದಿಲ್ಲ. ಹಾಗಾಗಿ ನಮಗೆ ಪರಿಹಾರದ ರೂಪದಲ್ಲಿ ಸಹ ಹಣ ಕೈ ಸೇರುತ್ತಿಲ್ಲ. ಹಾಗಾಗಿ ನಮಗೆ ಆನೆ ದಾಳಿಯಿಂದ ನುಂಗಲಾರದ ತುತ್ತಾಗಿದೆ ಎಂದು ಕೋಣನಕೆರೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದಿವಾಸಿ ಸಮುದಾಯದ ಜನರು ಬದುಕುತ್ತಿರುವ ಪ್ರದೇಶಗಳಲ್ಲಿ ಕಾಡಾನೆ ಅಥವಾ ಕಾಡು ಪ್ರಾಣಿಗಳಿಂದ ಬೆಳೆಗಳಿಗೆ ಹಾನಿಯಾದರೆ ಅದಕ್ಕೆ ತಕ್ಕಂತೆ ಪರಿಹಾರ ಸಿಗುತ್ತಿಲ್ಲ. ಹಾಗಾಗಿ ಕಾಡುಪ್ರಾಣಿಗಳ ಉಪಟಳದಿಂದ ಬೆಳೆಯನ್ನು ರಕ್ಷಿಸಬೇಕು. ದವಸ ಧಾನ್ಯಗಳನ್ನ ಬೆಳೆಯಲು ಅನುಕೂಲ ಕಲ್ಪಿಸಬೇಕು ಎಂದು ಸೋಲಿಗ ಸಮುದಾಯದ ಮುಖಂಡ ಮುತ್ತಯ್ಯ ಆಗ್ರಹಿಸಿದ್ದಾರೆ.
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…