ಚಾಮರಾಜನಗರ

ಹನೂರು| ನಿರಂತರ ಕಾಡಾನೆ ದಾಳಿಯಿಂದ ರಾಗಿ ಬೆಳೆ ನಾಶ: ಕಂಗಾಲಾದ ಜನರು

ಹನೂರು: ನಿರಂತರ ಕಾಡಾನೆ ದಾಳಿಯಿಂದಾಗಿ ರಾಗಿ ಫಸಲು ಹಾನಿಯಾಗಿದ್ದು, ಇತ್ತ ಬೆಳೆಯೂ ಇಲ್ಲದೇ ಅತ್ತ ಪರಿಹಾರವೂ ಇಲ್ಲದೇ ಅತಂತ್ರ ಸ್ಥಿತಿಗೆ ತಲುಪಿದ್ದೇವೆ ಎಂದು ಕೋಣನಕೆರೆ ಗ್ರಾಮದ ಕಾಳಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣನಕೆರೆ ಗ್ರಾಮದಲ್ಲಿ ಕಾಳಮ್ಮ ಬಿನ್ ಮಾದಯ್ಯ ಎಂಬುವವರು, ಪಾರಂಪರಿಕ ಅರಣ್ಯವಾಸಿ ಕಾಯ್ದೆ ಅಡಿಯಲ್ಲಿ ತಮಗೆ ಸರ್ಕಾರ ನೀಡಿರುವ 1.17 ಎಕರೆ ಜಮೀನಿನಲ್ಲಿ ರಾಗಿ ಬೆಳೆ ಬೆಳೆದಿದ್ದರು. ಇದೀಗ ಕಳೆದ ಎರಡು ದಿನಗಳಿಂದಲೂ ಸಹ ನಿರಂತರವಾಗಿ ಕಾಡಾನೆ ದಾಳಿ ಮಾಡುತ್ತಿದ್ದು, ಬೆಳೆ ನಾಶವಾಗುತ್ತಿದೆ ಎಂದು ರೈತ ಮಹಿಳೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಕೋಣನಕೆರೆ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದಲೂ ಸಹ ನಿರಂತರವಾಗಿ ಕಾಡಾನೆಗಳು ಜಮೀನಿಗೆ ನುಗ್ಗಿ ಬೆಳೆಗಳನ್ನು ತಿಂದು ತೇಗಿ, ಜೊತೆಗೆ ತುಳಿದು ಹಾಳು ಮಾಡುತ್ತಿದ್ದು ಬೆಳೆ ರೈತನ ಕೈ ಸೇರದೆ ಕೈಗೆ ಬಂದ ತುತ್ತು ಬಾಯಿಗೆ ಬಾರದಾಗಿದೆ. ಇದರಿಂದ ರೈತ ಮಹಿಳೆ ಸಾಲದ ಸುಳಿಯಲ್ಲಿ ಸಿಲುಕಿ ಸಾಲ ತೀರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿ ಕಂಗಾಲಾಗಿದ್ದಾರೆ. ಜೊತೆಗೆ ನಿರಂತರ ದಾಳಿಯಿಂದ ಬೇಸತ್ತು ವ್ಯವಸಾಯ ಮಾಡುವುದನ್ನೇ ನಿಲ್ಲಿಸಿ ಬಿಡಬೇಕು ಎಂಬಂತಾಗಿದೆ ಎಂದು ಅಸಹಾಯಕತೆ ತೋಡಿಕೊಂಡಿದ್ದಾರೆ.

ಆದಿವಾಸಿ ಸಮುದಾಯಕ್ಕೆ ನೀಡಿರುವ ಜಮೀನುಗಳಿಗೆ ಕೇವಲ ಹಕ್ಕು ಪತ್ರಗಳನ್ನು ಮಾತ್ರ ನೀಡಿದ್ದು, ಹಕ್ಕು ಪತ್ರಗಳನ್ನ ನೀಡಿದರೆ ಸರ್ಕಾರ ಅಥವಾ ಸಂಬಂಧಪಟ್ಟ ಅರಣ್ಯ ಇಲಾಖೆ ಬೆಳೆ ಪರಿಹಾರವನ್ನು ನೀಡುವುದಿಲ್ಲ. ಬದಲಿಗೆ ಸೂಕ್ತ ದಾಖಲಾತಿಗಳನ್ನು ಒದಗಿಸಿ ಎಂದು ಹೇಳುತ್ತಾರೆ. ಆದರೆ ಅರಣ್ಯ ವಾಸಿ ಕಾಯ್ದೆ ಅಡಿಯಲ್ಲಿ ನಮಗೆ ನೀಡಿರುವ ಜಮೀನುಗಳಿಗೆ ಕೇವಲ ಹಕ್ಕು ಪಾತ್ರಗಳನ್ನು ಮಾತ್ರ ನೀಡಿದ್ದು, ಉಳಿದಂತೆ ಯಾವುದೇ ಪಹಣಿ ದಾಖಲಾತಿಗಳು ನಮ್ಮಲ್ಲಿ ಇರುವುದಿಲ್ಲ. ಹಾಗಾಗಿ ನಮಗೆ ಪರಿಹಾರದ ರೂಪದಲ್ಲಿ ಸಹ ಹಣ ಕೈ ಸೇರುತ್ತಿಲ್ಲ. ಹಾಗಾಗಿ ನಮಗೆ ಆನೆ ದಾಳಿಯಿಂದ ನುಂಗಲಾರದ ತುತ್ತಾಗಿದೆ ಎಂದು ಕೋಣನಕೆರೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದಿವಾಸಿ ಸಮುದಾಯದ ಜನರು ಬದುಕುತ್ತಿರುವ ಪ್ರದೇಶಗಳಲ್ಲಿ ಕಾಡಾನೆ ಅಥವಾ ಕಾಡು ಪ್ರಾಣಿಗಳಿಂದ ಬೆಳೆಗಳಿಗೆ ಹಾನಿಯಾದರೆ ಅದಕ್ಕೆ ತಕ್ಕಂತೆ ಪರಿಹಾರ ಸಿಗುತ್ತಿಲ್ಲ. ಹಾಗಾಗಿ ಕಾಡುಪ್ರಾಣಿಗಳ ಉಪಟಳದಿಂದ ಬೆಳೆಯನ್ನು ರಕ್ಷಿಸಬೇಕು. ದವಸ ಧಾನ್ಯಗಳನ್ನ ಬೆಳೆಯಲು ಅನುಕೂಲ ಕಲ್ಪಿಸಬೇಕು ಎಂದು ಸೋಲಿಗ ಸಮುದಾಯದ ಮುಖಂಡ ಮುತ್ತಯ್ಯ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

17 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

17 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

17 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

17 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

17 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago