ಹನೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆಯ ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಉಮಾಪತಿ, ಇವರ ಸಹೋದರ ಸುರೇಶ್ ಎಂಬವರಿಗೆ ಸೇರಿದ ಮನೆ ಇದಾಗಿದೆ. ಉಮಾಪತಿ ಬೆಂಗಳೂರಿನಲ್ಲಿ ವಾಸವಿದ್ದು ಸುರೇಶ್ರವರು ಗ್ರಾಮದ ಮನೆಯಲ್ಲಿ ವಾಸವಿರುತ್ತಿದ್ದರು.
ಸೋಮವಾರ ತಡರಾತ್ರಿ ಇದ್ದಕ್ಕಿದ್ದಂತೆ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಶಾಖಕ್ಕೆ ಮನೆಯಲ್ಲಿ ಮಲಗಿದ್ದ ಸುರೇಶ್ ತಪ್ಪಿಸಿಕೊಂಡು ಹೋಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮನೆಯ ಚಾವಣಿ ಸಂಪೂರ್ಣ ಸುಟ್ಟುಹೋಗಿದೆ. ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಿದ್ದಾರೆ.
ತಹಸಿಲ್ದಾರ್ ಭೇಟಿ: ಪಿ.ಜಿ.ಪಾಳ್ಯ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಆಕಸ್ಮಿಕ ಬೆಂಕಿಗೆ ಮನೆಯ ಚಾವಣಿ ಸುಟ್ಟು ಹೋಗಿರುವ ಬಗ್ಗೆ ಸುರೇಶ್ ರವರು ದೂರವಾಣಿ ಮುಖಾಂತರ ತಹಸಿಲ್ದಾರ್ ರವರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ ತಹಸಿಲ್ದಾರ್ ಗುರುಪ್ರಸಾದ್ ಹಾಗೂ ಲೊಕ್ಕನಹಳ್ಳಿ ಕಂದಾಯ ನಿರೀಕ್ಷಕ ಮಹದೇವಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ತಹಸಿಲ್ದಾರ್ ಮಾತನಾಡಿ, ಮನೆಗೆ ಸಂಬಂಽಸಿದಂತೆ ಸಮರ್ಪಕ ದಾಖಲಾತಿಗಳನ್ನು ನೀಡಿದರೆ ಪ್ರಕೃತಿ ವಿಕೋಪದಡಿ ನೀಡಲಾಗುವ ಪರಿಹಾರದ ಹಣವನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಈ ವೇಳೆ ಪಿ.ಜಿ.ಪಾಳ್ಯ ಗ್ರಾಮ ಆಡಳಿತಾಽಕಾರಿ ಹಾಜರಿದ್ದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…