ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಧಿತರು ಹನೂರು ತಾಲೂಕಿನ ದಿನ್ನಳ್ಳಿ ಗ್ರಾಮದ ಅಬ್ದುಲ್ ಮೋಮಿನ್ (28), ಅಮೀರ್ ಖಾನ್ (24), ಮುಜಾಹಿದ್ ಪಾಷಾ (24), ಮಹಮ್ಮದ್ ಸಾಹೀಲ್ (19) ಹಾಗೂ ಅಲಿಮುಲ್ಲಾ (19) ಎಂದು ಗುರುತಿಸಲಾಗಿದೆ.
ಘಟನೆ ವಿವರ
ಹುಣಸೆಮರದ ದೊಡ್ಡಿ ಯಡಿಯಾರಳ್ಳಿ ಗ್ರಾಮದ ಪುಟ್ಟಮಾದೇಗೌಡ ಹಾಗೂ ಅವರ ಇಬ್ಬರು ಮಕ್ಕಳು ಪ್ರತ್ಯೇಕವಾಗಿ ಮೂರು ಮನೆಗಳಲ್ಲಿ ವಾಸವಾಗಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರಿಂದ ಮನೆಗಳಿಗೆ ಬೀಗ ಹಾಕಲಾಗಿತ್ತು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿದ ಆರೋಪಿಗಳು ಡಿಸೆಂಬರ್ 12ರಂದು ಮೂರು ಮನೆಗಳ ಬೀಗ ಒಡೆದು ಸುಮಾರು 22 ಗ್ರಾಂ ಚಿನ್ನ ಹಾಗೂ 10 ಸಾವಿರ ರೂಪಾಯಿ ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದರು.
ಈ ಕುರಿತು ಪುಟ್ಟಮಾದೇಗೌಡ ರಾಮಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ನೇತೃತ್ವದಲ್ಲಿ ಸಬ್ಇನ್ಸ್ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ವೇಳೆ ದೊರೆತ ಖಚಿತ ಮಾಹಿತಿ ಮೇರೆಗೆ ದಿನ್ನಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಐವರನ್ನು ಬಂಧಿಸಿ, ಕೊಳ್ಳೇಗಾಲ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…