ಚಾಮರಾಜನಗರ

ಹನೂರು: ಬಿಆರ್‌ಟಿ ಹುಲಿ ಸಂರಕ್ಷಿತ ವಲಯದಲ್ಲಿ ನಾಲ್ಕು ದಿನದಲ್ಲಿ ಮೂರು ಆನೆಗಳ ಅಸ್ತಿಪಂಜರ ಪತ್ತೆ

ಹನೂರು: ತಾಲೂಕಿನ ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಪ್ರತಿದಿನ ಕಳ್ಳ ಬೇಟೆ ಶಿಬಿರ, ಬೀಟ್ ಸಿಬ್ಬಂದಿಗಳು ಪ್ರತಿದಿನ ಗಸ್ತುತಿರುಗುತ್ತಿದ್ದರು ಪ್ರಾಣಿಗಳು ಸಾಯುತ್ತಿರುವುದು ಏಕೆ ತಿಳಿಯುತ್ತಿಲ್ಲ ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನೆ ಮಾಡಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ಆಳದ ಕೆರೆ ಅರಣ್ಯ ಪ್ರದೇಶದಲ್ಲಿ ಎಂಟು ತಿಂಗಳ ಹಿಂದೆ ಸ್ವಾಭಾವಿಕವಾಗಿ ಗಂಡಾನೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಎಂಟು ತಿಂಗಳ ಹಿಂದೆ ಆನೆ ಮೃತಪಟ್ಟಿರುವುದು ತಕ್ಷಣ ಬೆಳಕಿಗೆ ಬಂದಿಲ್ಲವಾದರೆ ಗಸ್ತು ಸಿಬ್ಬಂದಿಗಳು ಅರಣ್ಯದಲ್ಲಿ ಯಾವ ರೀತಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಏನು ಮಾಡುತ್ತಿದ್ದಾರೆ? ಗಸ್ತು ತಿರುಗುತ್ತಿದ್ದಾರೋ ಅಥವಾ ಕೇವಲ ಸಂಬಳ ಪಡೆದುಕೊಂಡು ಕಾಲಹರಣ ಮಾಡುತ್ತಿದ್ದಾರೆಯೋ ಎಂಬ ಅನುಮಾನ ಕಾಡುತ್ತಿದೆ.

ಆಗಸ್ಟ್ 27ರಂದೇ ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಯಳಂದೂರು ವನ್ಯಜೀವಿ ವಲಯ ಪುರಾಣಿ ಶಾಖೆ ಬೇತಾಳ ಕಟ್ಟೆ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಆಳಶೆಟ್ಟಿಕಟ್ಟೆ ಮೂಲೆ ಎಂಬ ಅರಣ್ಯ ಪ್ರದೇಶದಲ್ಲಿ ಗಂಡಾನೆಯು ಮೃತಪಟ್ಟಿತ್ತು.

ಇದೇ ರೀತಿ ಆಗಸ್ಟ್ 30 ರಂದು ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಬೈಲೂರು ವ್ಯಾಪ್ತಿಯಲ್ಲಿ ಮತ್ತೊಂದು ಆನೆ ಶವ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬೈಲೂರು ವನ್ಯ ಜೀವಿ ವಲಯ ಪಿ ಜಿ ಪಾಳ್ಯ ಮಾವತ್ತೂರು ಬಿ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತು ಮಾಡುವಾಗ ದೂಪದ ಮರದ ಹೊಡ್ಡು ಅರಣ್ಯ ಪ್ರದೇಶದಲ್ಲಿ ಮೃತ ಆನೆ ಪತ್ತೆಯಾಗಿದೆ. ಸುಮಾರು 60 ರಿಂದ 65 ವಯಸ್ಸಿನ ಹೆಣ್ಣಾನೆಯಾಗಿದ್ದು ಸುಮಾರು 8 ದಿನಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿರಬಹುದು ಎಂದು ದೃಢಪಡಿಸಿದ್ದಾರೆ.

ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಯಾವುದಾದರೂ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿದೆಯೇ ಎಂಬ ಅನುಮಾನ ಕಾಡುತ್ತಿದೆ.

ಏಷ್ಯಾದ ಅತಿ ದೊಡ್ಡ ಅರಣ್ಯ ಪ್ರದೇಶ ಎಂಬ ಬಿರುದು ಪಡೆದಿರುವ ಬಿ ಆರ್ ಟಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ವನ್ಯ ಪ್ರಾಣಿಗಳು ಮೃತಪಡುತ್ತಿರುವುದಕ್ಕೆ ವನ್ಯಜೀವಿ ಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ.

ಅರಣ್ಯ ಪ್ರದೇಶದ ರಸ್ತೆಯಿಂದ ಎರಡು ಕಿಲೋ ಮೀಟರ್ ದೂರದಲ್ಲಿರುವ ಬಿದಿರಿನ ಪೊದೆಯಲ್ಲಿ ಆನೆ ಮೃತಪಟ್ಟಿರುವುದರಿಂದ ತಡವಾಗಿ ಗೊತ್ತಾಗಿದೆ. ನಮ್ಮ ಸಿಬ್ಬಂದಿಗಳು ಪ್ರತಿದಿನ ಗಸ್ತು ಮಾಡುತ್ತಾರೆ. ಆನೆಗಳು ಸ್ವಾಭಾವಿಕವಾಗಿ ಮೃತಪಟ್ಟಿದೆ.

ಪ್ರಮೋದ್ ಆರ್ ಎಫ್ ಒ
ಬೈಲೂರು ವನ್ಯ ಜೀವಿ ವಲಯ

ಬಿ ಆರ್ ಟಿ ಅರಣ್ಯ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು ಕಾಡು ಪ್ರಾಣಿಗಳಿಗೆ ಮೇವು ಹಾಗೂ ನೀರು ಚೆನ್ನಾಗಿ ಸಿಗುತ್ತಿದೆ. ಆದರೆ ಒಂದೇ ವಾರದಲ್ಲಿ ಎರಡು ಆನೆಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆನೆಗಳಿಗೆ ಯಾವುದಾದರೂ ಸಾಂಕ್ರಾಮಿಕ ರೋಗ ತಗುಲಿದೆಯೇ ಎಂಬುದನ್ನು ಹಿರಿಯಾ ಅಧಿಕಾರಿಗಳು ಪರಿಶೀಲನೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು.

ಎನ್ ಕೃಷ್ಣಮೂರ್ತಿ
ಪರಿವರ್ತನ ಗ್ರಾಮ ಸಮಿತಿ ಅಧ್ಯಕ್ಷರು
ಚಿಕ್ಕರಂಗ ಶೆಟ್ಟಿ ದೊಡ್ಡಿ

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

3 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

3 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

3 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

14 hours ago