ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ ಕೆಲ ಕಿಡಿಗೇಡಿಗಳು ಗುಡ್ಡವನ್ನೇ ಅಗೆದಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೊಡ್ಡಾಲತ್ತೂರು ಗ್ರಾಪಂನ ಸರ್ಕಾರಿ ಗುಡ್ಡವನ್ನು ಅಗೆದಿದ್ದು ಭಾನುವಾರ ವಿಚಾರ ಬೆಳಕಿಗೆ ಬಂದಿದೆ. 90 ಸೆಂಟ್ಗೂ ಅಧಿಕ ವಿಸ್ತೀರ್ಣದ ಗುಡ್ಡಗಳನ್ನು ಚಿನ್ನ ಸಿಗಬಹುದೆಂದು ಅಗೆದಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ತನಿಖೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ ಅಧಿಕಾರಿಗಳು ರಾಜ್ಯದ ನಾನಾ ಭಾಗಗಳಲ್ಲಿ ಖನಿಜ ನಿಕ್ಷೇಪಗಳ ಲಭ್ಯತೆ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು ಅದರಂತೆ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಅಧ್ಯಯನ ಕೈಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…