ಚಾಮರಾಜನಗರ

ಹನೂರು | ಚಿನ್ನ ನಿಕ್ಷೇಪದ ಶಂಕೆ ; ಗುಡ್ಡವನ್ನೇ ಅಗೆದ ಕಿಡಿಗೇಡಿಗಳು

ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ ಕೆಲ ಕಿಡಿಗೇಡಿಗಳು ಗುಡ್ಡವನ್ನೇ ಅಗೆದಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೊಡ್ಡಾಲತ್ತೂರು ಗ್ರಾಪಂನ ಸರ್ಕಾರಿ ಗುಡ್ಡವನ್ನು ಅಗೆದಿದ್ದು ಭಾನುವಾರ ವಿಚಾರ ಬೆಳಕಿಗೆ ಬಂದಿದೆ. 90 ಸೆಂಟ್‌ಗೂ ಅಧಿಕ ವಿಸ್ತೀರ್ಣದ ಗುಡ್ಡಗಳನ್ನು ಚಿನ್ನ ಸಿಗಬಹುದೆಂದು ಅಗೆದಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ತನಿಖೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ ಅಧಿಕಾರಿಗಳು ರಾಜ್ಯದ ನಾನಾ ಭಾಗಗಳಲ್ಲಿ ಖನಿಜ ನಿಕ್ಷೇಪಗಳ ಲಭ್ಯತೆ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು ಅದರಂತೆ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಅಧ್ಯಯನ ಕೈಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

9 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

9 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

9 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

9 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

21 hours ago