Hanur | Suspicious Death of Four Tigers: Poisoning Suspected
ಹನೂರು: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವಲಯ ವ್ಯಾಪ್ತಿಯ ಮಿಣ್ಯಂ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತಾಯಿ ಹುಲಿ ಹಾಗೂ ಹುಲಿ ಮರಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಹನೂರು ತಾಲೂಕು ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ಕಾವೇರಿ ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳಿವೆ. ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಆಗಾಗ ಹುಲಿಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಪಿ.ಜಿ ಪಾಳ್ಯ ಹಾಗೂ ಅಜ್ಜೀಪುರ ಸಫಾರಿ ಕೇಂದ್ರ ಪ್ರಾರಂಭವಾದ ನಂತರ ಹುಲಿಗಳು ಕಾಣಿಸಿಕೊಳ್ಳುತ್ತಿದೆ.
ಇದೀಗ ಹೂಗ್ಯಂ ವಲಯ ವ್ಯಾಪ್ತಿಯಲ್ಲಿ ಏಕಾಏಕಿ ತಾಯಿ ಹುಲಿ ಹಾಗೂ ಮರಿ ಹುಲಿಗಳು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ವಿಷಪ್ರಾಶನದಿಂದ ಮೃತಪಟ್ಟಿರುವ ಶಂಕೆ?: ಹೂಗ್ಯಂ ವಲಯ ವ್ಯಾಪ್ತಿಯ ಮಿಣ್ಯಂ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಹುಲಿ ದಾಳಿಗೆ ಒಂದು ಹಸು ಮೃತಪಟ್ಟಿತ್ತು. ಮತ್ತೆ ಮಾಂಸ ತಿನ್ನಲು ಹುಲಿ ಬರುತ್ತದೆ ಎಂದು ಶಂಕಿಸಿ ವಿಷಪ್ರಾಶನ ಮಾಡಿದ್ದಾರೆ. ಇದನ್ನು ತಿಂದ ತಾಯಿ ಹುಲಿ ಹಾಗೂ ಮರಿಗಳು ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…