Hanur | Suspicious Death of Four Tigers: Poisoning Suspected
ಹನೂರು: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವಲಯ ವ್ಯಾಪ್ತಿಯ ಮಿಣ್ಯಂ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತಾಯಿ ಹುಲಿ ಹಾಗೂ ಹುಲಿ ಮರಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಹನೂರು ತಾಲೂಕು ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ಕಾವೇರಿ ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳಿವೆ. ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಆಗಾಗ ಹುಲಿಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಪಿ.ಜಿ ಪಾಳ್ಯ ಹಾಗೂ ಅಜ್ಜೀಪುರ ಸಫಾರಿ ಕೇಂದ್ರ ಪ್ರಾರಂಭವಾದ ನಂತರ ಹುಲಿಗಳು ಕಾಣಿಸಿಕೊಳ್ಳುತ್ತಿದೆ.
ಇದೀಗ ಹೂಗ್ಯಂ ವಲಯ ವ್ಯಾಪ್ತಿಯಲ್ಲಿ ಏಕಾಏಕಿ ತಾಯಿ ಹುಲಿ ಹಾಗೂ ಮರಿ ಹುಲಿಗಳು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ವಿಷಪ್ರಾಶನದಿಂದ ಮೃತಪಟ್ಟಿರುವ ಶಂಕೆ?: ಹೂಗ್ಯಂ ವಲಯ ವ್ಯಾಪ್ತಿಯ ಮಿಣ್ಯಂ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಹುಲಿ ದಾಳಿಗೆ ಒಂದು ಹಸು ಮೃತಪಟ್ಟಿತ್ತು. ಮತ್ತೆ ಮಾಂಸ ತಿನ್ನಲು ಹುಲಿ ಬರುತ್ತದೆ ಎಂದು ಶಂಕಿಸಿ ವಿಷಪ್ರಾಶನ ಮಾಡಿದ್ದಾರೆ. ಇದನ್ನು ತಿಂದ ತಾಯಿ ಹುಲಿ ಹಾಗೂ ಮರಿಗಳು ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…