ಚಾಮರಾಜನಗರ

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮದಿಂದ ಖಾಸಗಿ ಬಸ್ ಮೂಲಕ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಹುಲಿ ದರ್ಶನ ನೀಡಿದೆ. ಬಸ್ಸಿನ ಚಾಲಕ ಹುಲಿಯನ್ನು ಕಂಡು ಕೆಲವು ಸಮಯ ರಸ್ತೆಯಲ್ಲಿ ನಿಲ್ಲಿಸಿದ್ದಾನೆ. ಈ ವೇಳೆ ಹುಲಿಯು ಒಂದು ಕಡೆಯಿಂದ ಮತ್ತೊಂದು ಕಡೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಪ್ರಯಾಣಿಕರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಇದನ್ನು ಓದಿ: ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಇನ್ನು ಈ ರಸ್ತೆಯ ಮೂಲಕ ದ್ವಿಚಕ್ರವಾಹನದಲ್ಲಿ ಹೋಗುವ ವಾಹನ ಸವಾರರು ಮುಂಜಾಗ್ರತಾ ಕ್ರಮ ವಹಿಸಬೇಕು. ಈ ಮಾರ್ಗದಲ್ಲಿ ಹುಲಿ ಚಿರತೆ ಆನೆ ಸೇರಿದಂತೆ ಇನ್ನಿತರ ಪ್ರಾಣಿಗಳು ಆಗಾಗ ಕಾಣಿಸಿಕೊಳ್ಳುತ್ತಿವೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಎಚ್ಚರಿಕೆ ವಹಿಸುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.

ಕಳೆದ ಜೂನ್ ತಿಂಗಳಿನಲ್ಲಿಯೂ ಇದೆ ಅರಣ್ಯ ವ್ಯಾಪ್ತಿಯಲ್ಲಿ ಐದು ಹುಲಿಗಳನ್ನು ವಿಷ ಹಾಕಿಕೊಳ್ಳಲಾಗಿತ್ತು. ಈ ಅರಣ್ಯ ವ್ಯಾಪ್ತಿಯಲ್ಲಿಯೇ ಮತ್ತಷ್ಟು ಹುಲಿಗಳಿರುವುದು ವನ್ಯಪ್ರಿಯರಿಗೆ ಸಂತಸವನ್ನುಂಟು ಮಾಡಿದೆ.

ಆಂದೋಲನ ಡೆಸ್ಕ್

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

4 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

4 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

4 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

5 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

5 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

6 hours ago