ಚಾಮರಾಜನಗರ

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮದಿಂದ ಖಾಸಗಿ ಬಸ್ ಮೂಲಕ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಹುಲಿ ದರ್ಶನ ನೀಡಿದೆ. ಬಸ್ಸಿನ ಚಾಲಕ ಹುಲಿಯನ್ನು ಕಂಡು ಕೆಲವು ಸಮಯ ರಸ್ತೆಯಲ್ಲಿ ನಿಲ್ಲಿಸಿದ್ದಾನೆ. ಈ ವೇಳೆ ಹುಲಿಯು ಒಂದು ಕಡೆಯಿಂದ ಮತ್ತೊಂದು ಕಡೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಪ್ರಯಾಣಿಕರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಇದನ್ನು ಓದಿ: ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಇನ್ನು ಈ ರಸ್ತೆಯ ಮೂಲಕ ದ್ವಿಚಕ್ರವಾಹನದಲ್ಲಿ ಹೋಗುವ ವಾಹನ ಸವಾರರು ಮುಂಜಾಗ್ರತಾ ಕ್ರಮ ವಹಿಸಬೇಕು. ಈ ಮಾರ್ಗದಲ್ಲಿ ಹುಲಿ ಚಿರತೆ ಆನೆ ಸೇರಿದಂತೆ ಇನ್ನಿತರ ಪ್ರಾಣಿಗಳು ಆಗಾಗ ಕಾಣಿಸಿಕೊಳ್ಳುತ್ತಿವೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಎಚ್ಚರಿಕೆ ವಹಿಸುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.

ಕಳೆದ ಜೂನ್ ತಿಂಗಳಿನಲ್ಲಿಯೂ ಇದೆ ಅರಣ್ಯ ವ್ಯಾಪ್ತಿಯಲ್ಲಿ ಐದು ಹುಲಿಗಳನ್ನು ವಿಷ ಹಾಕಿಕೊಳ್ಳಲಾಗಿತ್ತು. ಈ ಅರಣ್ಯ ವ್ಯಾಪ್ತಿಯಲ್ಲಿಯೇ ಮತ್ತಷ್ಟು ಹುಲಿಗಳಿರುವುದು ವನ್ಯಪ್ರಿಯರಿಗೆ ಸಂತಸವನ್ನುಂಟು ಮಾಡಿದೆ.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

3 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

3 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

3 hours ago