ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ ರೋಡ್ ಸಮೀಪ ಜರುಗಿದೆ.
ಹನೂರು ಪಟ್ಟಣದಿಂದ ಅಜ್ಜಿಪುರ ರಾಮಾಪುರ ಮಾರ್ಗವಾಗಿ ನಾಲ್ ರೋಡ್ ಹೂಗ್ಯಂಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಅರಣ್ಯದ ತಡೆಗೋಡೆಗೆ ಹೊಡೆದು ಮರಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಬಸ್ಸಿನಲ್ಲಿದ್ದ 39 ಮಂದಿ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಉಳಿದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ತಪ್ಪಿದ ಬಾರಿ ಅನಾಹುತ
ಹನೂರು ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಬಸ್ಸಿನ ಸ್ಟೇರಿಂಗ್ ಲಾಕ್ ಆದ ಪರಿಣಾಮ ಬಸ್ ಚಾಲಕನ ನಿಯಂತ್ರಣಕ್ಕೆ ಸಿಕ್ಕಿಲ್ಲ ಈ ವೇಳೆ ಚಾಲಕ ರಸ್ತೆ ಭಾಗದಲ್ಲಿದ್ದ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾರೆ ಆದರೆ ಅತಿ ವೇಗದಲ್ಲಿದ್ದ ಬಸ್ ತಡೆಗೋಡೆಯನ್ನು ದಾಟಿ ಅರಣ್ಯದಲ್ಲಿದ್ದ ಬೃಹತ್ ಮರಕ್ಕೆ ಡಿಕ್ಕಿ ಹೊಡೆದಿದೆ ಮರ ಇಲ್ಲದಿದ್ದರೆ ಬಸ್ ಪಲ್ಟಿಯಾಗಿ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ವಿಚಾರ ತಿಳಿಯುತ್ತಿದ್ದಂತೆ ರಾಮಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಿದ್ದಾರೆ.
ಇನ್ನು ಹನೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಸಂಚರಿಸುತ್ತಿರುವ ಕೆಎಸ್ಆರ್ಟಿಸಿ ಬಸ್ ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಮುಂದಿನ ದಿನಗಳಲ್ಲಾದರು ಸಮರ್ಪಕ ನಿರ್ವಹಣೆಯೊಂದಿಗೆ ಗುಣಮಟ್ಟದ ಬಸ್ ಗಳನ್ನು ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ನಾಗರಿಕರು ಮನವಿ ಮಾಡಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…