ಚಾಮರಾಜನಗರ

ಹನೂರು: ಒಕ್ಕಲಿಗ ಸಂಘದ ಅಧ್ಯಕ್ಷ, ಕಾರ್ಯದರ್ಶಿಗೆ ಸನ್ಮಾನ

ಹನೂರು: ಹನೂರು, ಕೊಳ್ಳೇಗಾಲ, ಯಳಂದೂರು ತಾಲೂಕಿನ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಕೆ ಸಿ ಮಾದೇಶ್, ಕಾರ್ಯದರ್ಶಿ ಸಿದ್ದಲೀಂಗೇಗೌಡ ರವರನ್ನು ವಿವಿಧ ಪದಾಧಿಕಾರಿಗಳು ಸನ್ಮಾನಿಸಿದರು.

ನಂತರ ನೂತನ ಅಧ್ಯಕ್ಷ ಕೆ ಸಿ ಮಾದೇಶ್ ಮಾತನಾಡಿ ಕಳೆದ ೧೩ ವರ್ಷಗಳಿಂದ ಚನ್ನಾಲಿಂಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷನಾಗಿ ಕೆಲಸ ಮಾಡಿರುವ ಅನುಭವವಿದೆ ನಾನು ಅಧ್ಯಕ್ಷನಾಗುವ ಮೊದಲು ಸಂಘವು ನಷ್ಟದಲ್ಲಿತ್ತು. ಇದೀಗ ಲಾಭದಲ್ಲಿ ನಡೆಯುತ್ತಿದೆ. ಹೊಸದಾಗಿ ನಿವೇಶನ ಖರೀದಿ ಮಾಡಿ ನೂತನ ಕಟ್ಟಡವನ್ನು ಸಹ ನಿರ್ಮಾಣ ಮಾಡಿದ್ದೇವೆ. ಸಂಘದ ಷೇರು ದಾರರಿಗೆ ೨.೨೭ ಕೋಟಿ ಹ ಸಾಲ ಕೊಡಿಸಿ ಮಾದರಿ ಸಂಘವನ್ನಾಗಿ ಮಾಡಿದ್ದೇನೆ ಎಂದರು.

ಇನ್ನು ಮೂರು ತಾಲೂಕುಗಳಲ್ಲಿ ಇರುವ ಸಮಾಜದವರೆಲ್ಲರೂ ಸೇರಿ ಒಕ್ಕಲಿಗ ಸಂಘ ರಚನೆ ಮಾಡಿ ಸಮಾಜದ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಕೊಳ್ಳೇಗಾಲ ಪಟ್ಟಣದಲ್ಲಿ ಶ್ರೀ ಜಿ.ವಿ ಗೌಡ ಕಾಲೇಜಿನಲ್ಲಿ ಎಲ್ ಕೆ ಜಿ ಯಿಂದ ಪ್ರಾರಂಭವಾಗಿ ದ್ವಿತೀಯ ಪಿಯುಸಿ ಹಾಗೂ ಡಿಎಡ್ ವರೆಗೂ ನಡೆಯುತ್ತಿದ್ದು ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ ಮುಂದಿನ ದಿನಗಳಲ್ಲಿ ಸಂಘದ ಗೌರವಾಧ್ಯಕ್ಷರು ಹಾಗೂ ಮಾಜಿ ಶಾಸಕ ಆರ್ ನರೇಂದ್ರ ರವರ ಮಾರ್ಗದರ್ಶನದಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡುವ ಮೂಲಕ ಸಂಘಕ್ಕೆ ಉತ್ತಮ ಹೆಸರು ತರುತ್ತೇನೆ ಈ ಕಾರ್ಯಕ್ಕೆ ಸಂಘದ ಎಲ್ಲಾ ನಿರ್ದೇಶಕರುಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ಶಿವಪುರ ಲೋಕೇಶ್, ದೊಡ್ಡಿಂದುವಾಡಿ ವೀರಭದ್ರ ಸ್ವಾಮಿ, ಉತ್ತಂಬಳ್ಳಿ ಸತೀಶ್, ಪಿಎಸಿಸಿ ನಿರ್ದೇಶಕ ಲಕ್ಕರಸನ ಪಾಳ್ಯ ಮಹೇಶ್, ಕೆಂಪನ ಪಾಳ್ಯ ಮಹೇಶ್, ಕುಂತೂರು ಬೃಂಗೇಶ್ ಮುಡಿಗುಂಡ ರಾಜೇಶ್, ಕಾಮಗೆರೆ ಗ್ರಾಮದ ರವಿ ಮಹದೇವಪ್ಪ, ಒಕ್ಕಲಿಗ ಸಂಘದ ಮಾಜಿ ಅಧ್ಯಕ್ಷ ಸುರಾಪುರ ರಾಜು, ಅಲ್ಕೆರೆ ಅಗ್ರಹಾರದ ಜಯಶೇಖರ್ ಸನ್ಮಾನಿಸಿ ಶುಭ ಕೋರಿದರು.

ಆಂದೋಲನ ಡೆಸ್ಕ್

Recent Posts

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

13 mins ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

20 mins ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

51 mins ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

2 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

2 hours ago

ಕುಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…

2 hours ago