ಹನೂರು: ಹನೂರು, ಕೊಳ್ಳೇಗಾಲ, ಯಳಂದೂರು ತಾಲೂಕಿನ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಕೆ ಸಿ ಮಾದೇಶ್, ಕಾರ್ಯದರ್ಶಿ ಸಿದ್ದಲೀಂಗೇಗೌಡ ರವರನ್ನು ವಿವಿಧ ಪದಾಧಿಕಾರಿಗಳು ಸನ್ಮಾನಿಸಿದರು.
ನಂತರ ನೂತನ ಅಧ್ಯಕ್ಷ ಕೆ ಸಿ ಮಾದೇಶ್ ಮಾತನಾಡಿ ಕಳೆದ ೧೩ ವರ್ಷಗಳಿಂದ ಚನ್ನಾಲಿಂಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷನಾಗಿ ಕೆಲಸ ಮಾಡಿರುವ ಅನುಭವವಿದೆ ನಾನು ಅಧ್ಯಕ್ಷನಾಗುವ ಮೊದಲು ಸಂಘವು ನಷ್ಟದಲ್ಲಿತ್ತು. ಇದೀಗ ಲಾಭದಲ್ಲಿ ನಡೆಯುತ್ತಿದೆ. ಹೊಸದಾಗಿ ನಿವೇಶನ ಖರೀದಿ ಮಾಡಿ ನೂತನ ಕಟ್ಟಡವನ್ನು ಸಹ ನಿರ್ಮಾಣ ಮಾಡಿದ್ದೇವೆ. ಸಂಘದ ಷೇರು ದಾರರಿಗೆ ೨.೨೭ ಕೋಟಿ ಹ ಸಾಲ ಕೊಡಿಸಿ ಮಾದರಿ ಸಂಘವನ್ನಾಗಿ ಮಾಡಿದ್ದೇನೆ ಎಂದರು.
ಇನ್ನು ಮೂರು ತಾಲೂಕುಗಳಲ್ಲಿ ಇರುವ ಸಮಾಜದವರೆಲ್ಲರೂ ಸೇರಿ ಒಕ್ಕಲಿಗ ಸಂಘ ರಚನೆ ಮಾಡಿ ಸಮಾಜದ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಕೊಳ್ಳೇಗಾಲ ಪಟ್ಟಣದಲ್ಲಿ ಶ್ರೀ ಜಿ.ವಿ ಗೌಡ ಕಾಲೇಜಿನಲ್ಲಿ ಎಲ್ ಕೆ ಜಿ ಯಿಂದ ಪ್ರಾರಂಭವಾಗಿ ದ್ವಿತೀಯ ಪಿಯುಸಿ ಹಾಗೂ ಡಿಎಡ್ ವರೆಗೂ ನಡೆಯುತ್ತಿದ್ದು ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ ಮುಂದಿನ ದಿನಗಳಲ್ಲಿ ಸಂಘದ ಗೌರವಾಧ್ಯಕ್ಷರು ಹಾಗೂ ಮಾಜಿ ಶಾಸಕ ಆರ್ ನರೇಂದ್ರ ರವರ ಮಾರ್ಗದರ್ಶನದಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡುವ ಮೂಲಕ ಸಂಘಕ್ಕೆ ಉತ್ತಮ ಹೆಸರು ತರುತ್ತೇನೆ ಈ ಕಾರ್ಯಕ್ಕೆ ಸಂಘದ ಎಲ್ಲಾ ನಿರ್ದೇಶಕರುಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ಶಿವಪುರ ಲೋಕೇಶ್, ದೊಡ್ಡಿಂದುವಾಡಿ ವೀರಭದ್ರ ಸ್ವಾಮಿ, ಉತ್ತಂಬಳ್ಳಿ ಸತೀಶ್, ಪಿಎಸಿಸಿ ನಿರ್ದೇಶಕ ಲಕ್ಕರಸನ ಪಾಳ್ಯ ಮಹೇಶ್, ಕೆಂಪನ ಪಾಳ್ಯ ಮಹೇಶ್, ಕುಂತೂರು ಬೃಂಗೇಶ್ ಮುಡಿಗುಂಡ ರಾಜೇಶ್, ಕಾಮಗೆರೆ ಗ್ರಾಮದ ರವಿ ಮಹದೇವಪ್ಪ, ಒಕ್ಕಲಿಗ ಸಂಘದ ಮಾಜಿ ಅಧ್ಯಕ್ಷ ಸುರಾಪುರ ರಾಜು, ಅಲ್ಕೆರೆ ಅಗ್ರಹಾರದ ಜಯಶೇಖರ್ ಸನ್ಮಾನಿಸಿ ಶುಭ ಕೋರಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…