ಚಾಮರಾಜನಗರ

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು ಚಿರತೆಗಳು ಕಾಣಿಸಿಕೊಂಡಿರುವ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ಅರಣ್ಯಪ್ರದೇಶದಿಂದ ಅರಣ್ಯ ಸಮೀಪದ ಗುಡ್ಡೆಯಲ್ಲಿ ಕರಿ ಮತ್ತು ಅರಿಶಿಣ ಬಿಳಿ ಮಿಶ್ರಿತಾ ಬಣ್ಣದ ಎರಡು ಚಿರತೆ ಗುಡ್ಡದ ಮೇಲ್ಭಾಗದಲ್ಲಿ ಕುಳಿತಿರುವುದನ್ನು ಸ್ಥಳೀಯರು ಗಮನಿಸಿ ತಕ್ಷಣವೇ ಗಾಬರಿಯಾಗಿದ್ದಾರೆ. ಜೋಡಿಯಾಗಿ ಚಿರತೆಗಳು ಸ್ಪಷ್ಟವಾಗಿ ಕಾಣಿಸಿಕೊಂಡಿರುವುದು ಅಪರೂಪ ಎನ್ನಲಾಗಿದೆ.

ಇತ್ತೀಚೆಗೆ ಚಿರತೆಗಳು ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದ ಸಾಕು ಪ್ರಾಣಿಗಳು ಹಾಗೂ ನಾಯಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದು ರೈತರಲ್ಲಿ ಆತಂಕ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾಡುಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸುವಂತೆ ರೈತರು ಮನವಿ ಮಾಡಿದ್ದಾರೆ.

ಸಾರ್ವಜನಿಕರಿಗೆ ಯಾವುದೇ ರೀತಿಯ ಅಪಾಯ ಉಂಟಾಗುವ ಮುನ್ನವೇ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪಿ ಜಿ ಪಾಳ್ಯ ವಲಯ ವ್ಯಾಪ್ತಿಯಲ್ಲಿ ಕರಿ ಚಿರತೆ ಕಾಣಿಸಿಕೊಂಡಿರಲಿಲ್ಲ ಇದೀಗ ಕರಿ ಚಿರತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದೆ. ಆಗೊಮ್ಮೆ ಹೀಗೊಮ್ಮೆ ದಾಟ್ ಕಾಡು, ಬೂದಿಪಡಗ, ಬೋರೆದೊಡ್ಡಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ನೋಡಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಅಧಿಕೃತವಾಗಿ ಕರಿ ಚಿರತೆ ಇರುವ ಬಗ್ಗೆ ಯಾವುದೇ ಸಾಕ್ಷಾಧಾರಗಳು ಇರಲಿಲ್ಲ. ಶನಿವಾರ ಮಧ್ಯಾಹ್ನ ಆಂಡಿ ಪಾಳ್ಯ ಬೀಟ್ ಅರಣ್ಯ ಪ್ರದೇಶದಲ್ಲಿ ಗಂಡು ಕರಿ ಚಿರತೆ ಕಾಣಿಸಿಕೊಂಡಿದೆ. ಇದುವರೆಗೂ ಸಫಾರಿಯಲ್ಲಿಯೂ ಕಾಣಿಸಿಕೊಂಡಿರಲಿಲ್ಲ ಎಂದು ವಲಯ ಅರಣ್ಯಾಧಿಕಾರಿ ಪುಟ್ಟರಾಜು ಆಂದೋಲನಕ್ಕೆ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

3 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

3 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

3 hours ago