ಚಾಮರಾಜನಗರ

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು ಚಿರತೆಗಳು ಕಾಣಿಸಿಕೊಂಡಿರುವ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ಅರಣ್ಯಪ್ರದೇಶದಿಂದ ಅರಣ್ಯ ಸಮೀಪದ ಗುಡ್ಡೆಯಲ್ಲಿ ಕರಿ ಮತ್ತು ಅರಿಶಿಣ ಬಿಳಿ ಮಿಶ್ರಿತಾ ಬಣ್ಣದ ಎರಡು ಚಿರತೆ ಗುಡ್ಡದ ಮೇಲ್ಭಾಗದಲ್ಲಿ ಕುಳಿತಿರುವುದನ್ನು ಸ್ಥಳೀಯರು ಗಮನಿಸಿ ತಕ್ಷಣವೇ ಗಾಬರಿಯಾಗಿದ್ದಾರೆ. ಜೋಡಿಯಾಗಿ ಚಿರತೆಗಳು ಸ್ಪಷ್ಟವಾಗಿ ಕಾಣಿಸಿಕೊಂಡಿರುವುದು ಅಪರೂಪ ಎನ್ನಲಾಗಿದೆ.

ಇತ್ತೀಚೆಗೆ ಚಿರತೆಗಳು ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದ ಸಾಕು ಪ್ರಾಣಿಗಳು ಹಾಗೂ ನಾಯಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದು ರೈತರಲ್ಲಿ ಆತಂಕ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾಡುಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸುವಂತೆ ರೈತರು ಮನವಿ ಮಾಡಿದ್ದಾರೆ.

ಸಾರ್ವಜನಿಕರಿಗೆ ಯಾವುದೇ ರೀತಿಯ ಅಪಾಯ ಉಂಟಾಗುವ ಮುನ್ನವೇ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪಿ ಜಿ ಪಾಳ್ಯ ವಲಯ ವ್ಯಾಪ್ತಿಯಲ್ಲಿ ಕರಿ ಚಿರತೆ ಕಾಣಿಸಿಕೊಂಡಿರಲಿಲ್ಲ ಇದೀಗ ಕರಿ ಚಿರತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದೆ. ಆಗೊಮ್ಮೆ ಹೀಗೊಮ್ಮೆ ದಾಟ್ ಕಾಡು, ಬೂದಿಪಡಗ, ಬೋರೆದೊಡ್ಡಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ನೋಡಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಅಧಿಕೃತವಾಗಿ ಕರಿ ಚಿರತೆ ಇರುವ ಬಗ್ಗೆ ಯಾವುದೇ ಸಾಕ್ಷಾಧಾರಗಳು ಇರಲಿಲ್ಲ. ಶನಿವಾರ ಮಧ್ಯಾಹ್ನ ಆಂಡಿ ಪಾಳ್ಯ ಬೀಟ್ ಅರಣ್ಯ ಪ್ರದೇಶದಲ್ಲಿ ಗಂಡು ಕರಿ ಚಿರತೆ ಕಾಣಿಸಿಕೊಂಡಿದೆ. ಇದುವರೆಗೂ ಸಫಾರಿಯಲ್ಲಿಯೂ ಕಾಣಿಸಿಕೊಂಡಿರಲಿಲ್ಲ ಎಂದು ವಲಯ ಅರಣ್ಯಾಧಿಕಾರಿ ಪುಟ್ಟರಾಜು ಆಂದೋಲನಕ್ಕೆ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago