ಚಾಮರಾಜನಗರ

ಹನೂರು: ಬಿಜೆಪಿ ಮುಖಂಡ ನಿಶಾಂತ್‌ಗೆ ಉಪ್ಪಾರ ಸಮುದಾಯದ ಬೆಂಬಲ

ಹನೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ರವರಿಗೆ ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡುತ್ತಿರುವ ಸಮಾಜ ಸೇವೆ, ಮತದಾರರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಅವರಿಗೆ ಬೆಂಬಲ ನೀಡಲಿದ್ದೇವೆ ಎಂದು ಉಪ್ಪಾರ ಸಮುದಾಯದ ಮುಖಂಡ ಚಿಕ್ಕನಂಜ ಶೆಟ್ಟಿ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ಮಧುವನಹಳ್ಳಿ ಗ್ರಾಮದಲ್ಲಿ ಮಾಧ್ಯಮದವರ ಮಾತನಾಡಿದ ಅವರು ಕಳೆದ ಐದು ವರ್ಷಗಳಿಂದ ಯುವ ಮುಖಂಡ ನಿಶಾಂತ್ ರವರು ಸಚಿವರು, ಶಾಸಕರಾಗಿ ಮಾಡುವ ಕೆಲಸವನ್ನು ಅಧಿಕಾರವಿಲ್ಲದೆ ಕ್ಷೇತ್ರದ ಜನರಿಗೆ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇವರಿಗೆ ಕೆಟ್ಟ ಹೆಸರು ತರಲು ಕಾಣದ ಕೈಗಳು ಜಿನಕನಹಳ್ಳಿ ಗ್ರಾಮದಲ್ಲಿ ನಿಶಾಂತ್ ರವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಯಾವುದೋ ವಿಡಿಯೋ ಕಳುಹಿಸಿ ಮಾಧ್ಯಮದಲ್ಲಿ ಬರುವಂತೆ ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಚಾರ ನಿಶಾಂತ್ ರವರು ಪ್ರತಿಯೊಂದು ಹಳ್ಳಿಗೂ ತಮ್ಮದೇ ಆದ ಕೈಲಾದ ಸಹಾಯ ಮಾಡಿದ್ದಾರೆ. ಅಂಗವಿಕಲರು ಮಠಮಾನ್ಯಗಳು, ದೇವಸ್ಥಾನಗಳು ಸಮುದಾಯ ಭವನಗಳು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ ಇವರ ಸೇವೆಯನ್ನು ಮತ್ತಷ್ಟು ಪಡೆಯಬೇಕಾದರೆ ಇವರನ್ನು ಮುಂದಿನ ದಿನಗಳಲ್ಲಿ ನಮ್ಮ ಜನಪ್ರತಿನಿಧಿಯನ್ನಾಗಿ ಮಾಡಲು ಶ್ರಮಿಸುತ್ತೇವೆ ಎಂದರು.

ಇನ್ನು ಪಕ್ಷದ ಮುಖಂಡ ವೃಷಭೇಂದ್ರ ಎಂಬುವವರು ಇವರಿಗೆ ಕೆಟ್ಟ ಹೆಸರು ತರಲು ಮಾಧ್ಯಮಕ್ಕೆ ವಿಡಿಯೋ ಕಳುಹಿಸಿದ್ದಾರೆ. ಇವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದರು.

ಮಧುವನಹಳ್ಳಿ ಗ್ರಾಮದ ಮಹದೇವಸ್ವಾಮಿ ಮಾತನಾಡಿ ಯುವ ಮುಖಂಡ ನಿಶಾಂತ್ ರವರ ಜನಪ್ರಿಯತೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಅವರ ಹೆಸರಿಗೆ ಕೆಟ್ಟ ಹೆಸರು ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮಧುವನಹಳ್ಳಿ ಗ್ರಾಮಕ್ಕೆ 28 ಲಕ್ಷಕ್ಕೂ ಹೆಚ್ಚು ಆರ್ಥಿಕವಾಗಿ ಸಹಾಯ ಮಾಡಿದ್ದಾರೆ. ಅವರಿಗೆ ಋಣಿಯಾಗಿ ಇರಬೇಕಾಗಿರುವುದು ನಮ್ಮ ಕರ್ತವ್ಯ ಮುಂದಿನ ದಿನಗಳಲ್ಲಿ ಆ ದೇವರು ಅವರಿಗೆ ಮತ್ತಷ್ಟು ಅಧಿಕಾರ ಕರುಣಿಸಲಿ, ರಾಜಕೀಯದಲ್ಲಿ ಸಣ್ಣಪುಟ್ಟ ವೈಷಮ್ಯ, ಟೀಕೆ ಟಿಪ್ಪಣಿಗಳು ಬರುವುದು ಸಹಜ ಇದನ್ನೆಲ್ಲವನ್ನು ಮೆಟ್ಟಿ ನಿಂತರೆ ಮಾತ್ರ ನಿಜವಾದ ಜನನಾಯಕನಾಗಲು ಸಾಧ್ಯ ನಿಮ್ಮ ಬೆಂಬಲಕ್ಕೆ ನಾವಿದ್ದೇವೆ ಯಾವುದಕ್ಕೂ ಹೆದರುವುದು ಬೇಡ ನೀವು ನಿಮ್ಮ ಸೇವೆಯನ್ನು ಮುಂದುವರೆಸಿ ಎಂದು ಧೈರ್ಯ ತುಂಬಿದರು.

ಈ ವೇಳೆ ಮಧುವನಹಳ್ಳಿ ಗ್ರಾಮದ ವಿವಿಧ ಸಮುದಾಯದ ಮುಖಂಡರುಗಳಾದ ಕಪ್ಪಣಶೆಟ್ಟರು ಮಾಸ್ಟರ್, ಕೆಂಪಶೆಟ್ರು, ಉತ್ತಮ್, ಮಹೇಶ್, ರಾಚಪ್ಪಾಜಿ, ನಿಂಗರಾಜು, ರಂಗಸ್ವಾಮಿ, ಆರ್.ಮಹದೇವಸ್ವಾಮಿ, ಆಟೋ ಚಾಲಕರ ಸಂಘದ ಅಧ್ಯಕ್ಷ ರಾಜೇಶ್, ಮಹದೇವಸ್ವಾಮಿ, ದೊಡ್ಡಸಿದ್ದಶೆಟ್ಟಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

8 seconds ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

2 mins ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

8 mins ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

3 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

3 hours ago