ಚಾಮರಾಜನಗರ

ಹನೂರು: ಬಿಜೆಪಿ ಮುಖಂಡ ನಿಶಾಂತ್‌ಗೆ ಉಪ್ಪಾರ ಸಮುದಾಯದ ಬೆಂಬಲ

ಹನೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ರವರಿಗೆ ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡುತ್ತಿರುವ ಸಮಾಜ ಸೇವೆ, ಮತದಾರರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಅವರಿಗೆ ಬೆಂಬಲ ನೀಡಲಿದ್ದೇವೆ ಎಂದು ಉಪ್ಪಾರ ಸಮುದಾಯದ ಮುಖಂಡ ಚಿಕ್ಕನಂಜ ಶೆಟ್ಟಿ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ಮಧುವನಹಳ್ಳಿ ಗ್ರಾಮದಲ್ಲಿ ಮಾಧ್ಯಮದವರ ಮಾತನಾಡಿದ ಅವರು ಕಳೆದ ಐದು ವರ್ಷಗಳಿಂದ ಯುವ ಮುಖಂಡ ನಿಶಾಂತ್ ರವರು ಸಚಿವರು, ಶಾಸಕರಾಗಿ ಮಾಡುವ ಕೆಲಸವನ್ನು ಅಧಿಕಾರವಿಲ್ಲದೆ ಕ್ಷೇತ್ರದ ಜನರಿಗೆ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇವರಿಗೆ ಕೆಟ್ಟ ಹೆಸರು ತರಲು ಕಾಣದ ಕೈಗಳು ಜಿನಕನಹಳ್ಳಿ ಗ್ರಾಮದಲ್ಲಿ ನಿಶಾಂತ್ ರವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಯಾವುದೋ ವಿಡಿಯೋ ಕಳುಹಿಸಿ ಮಾಧ್ಯಮದಲ್ಲಿ ಬರುವಂತೆ ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಚಾರ ನಿಶಾಂತ್ ರವರು ಪ್ರತಿಯೊಂದು ಹಳ್ಳಿಗೂ ತಮ್ಮದೇ ಆದ ಕೈಲಾದ ಸಹಾಯ ಮಾಡಿದ್ದಾರೆ. ಅಂಗವಿಕಲರು ಮಠಮಾನ್ಯಗಳು, ದೇವಸ್ಥಾನಗಳು ಸಮುದಾಯ ಭವನಗಳು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ ಇವರ ಸೇವೆಯನ್ನು ಮತ್ತಷ್ಟು ಪಡೆಯಬೇಕಾದರೆ ಇವರನ್ನು ಮುಂದಿನ ದಿನಗಳಲ್ಲಿ ನಮ್ಮ ಜನಪ್ರತಿನಿಧಿಯನ್ನಾಗಿ ಮಾಡಲು ಶ್ರಮಿಸುತ್ತೇವೆ ಎಂದರು.

ಇನ್ನು ಪಕ್ಷದ ಮುಖಂಡ ವೃಷಭೇಂದ್ರ ಎಂಬುವವರು ಇವರಿಗೆ ಕೆಟ್ಟ ಹೆಸರು ತರಲು ಮಾಧ್ಯಮಕ್ಕೆ ವಿಡಿಯೋ ಕಳುಹಿಸಿದ್ದಾರೆ. ಇವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದರು.

ಮಧುವನಹಳ್ಳಿ ಗ್ರಾಮದ ಮಹದೇವಸ್ವಾಮಿ ಮಾತನಾಡಿ ಯುವ ಮುಖಂಡ ನಿಶಾಂತ್ ರವರ ಜನಪ್ರಿಯತೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಅವರ ಹೆಸರಿಗೆ ಕೆಟ್ಟ ಹೆಸರು ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮಧುವನಹಳ್ಳಿ ಗ್ರಾಮಕ್ಕೆ 28 ಲಕ್ಷಕ್ಕೂ ಹೆಚ್ಚು ಆರ್ಥಿಕವಾಗಿ ಸಹಾಯ ಮಾಡಿದ್ದಾರೆ. ಅವರಿಗೆ ಋಣಿಯಾಗಿ ಇರಬೇಕಾಗಿರುವುದು ನಮ್ಮ ಕರ್ತವ್ಯ ಮುಂದಿನ ದಿನಗಳಲ್ಲಿ ಆ ದೇವರು ಅವರಿಗೆ ಮತ್ತಷ್ಟು ಅಧಿಕಾರ ಕರುಣಿಸಲಿ, ರಾಜಕೀಯದಲ್ಲಿ ಸಣ್ಣಪುಟ್ಟ ವೈಷಮ್ಯ, ಟೀಕೆ ಟಿಪ್ಪಣಿಗಳು ಬರುವುದು ಸಹಜ ಇದನ್ನೆಲ್ಲವನ್ನು ಮೆಟ್ಟಿ ನಿಂತರೆ ಮಾತ್ರ ನಿಜವಾದ ಜನನಾಯಕನಾಗಲು ಸಾಧ್ಯ ನಿಮ್ಮ ಬೆಂಬಲಕ್ಕೆ ನಾವಿದ್ದೇವೆ ಯಾವುದಕ್ಕೂ ಹೆದರುವುದು ಬೇಡ ನೀವು ನಿಮ್ಮ ಸೇವೆಯನ್ನು ಮುಂದುವರೆಸಿ ಎಂದು ಧೈರ್ಯ ತುಂಬಿದರು.

ಈ ವೇಳೆ ಮಧುವನಹಳ್ಳಿ ಗ್ರಾಮದ ವಿವಿಧ ಸಮುದಾಯದ ಮುಖಂಡರುಗಳಾದ ಕಪ್ಪಣಶೆಟ್ಟರು ಮಾಸ್ಟರ್, ಕೆಂಪಶೆಟ್ರು, ಉತ್ತಮ್, ಮಹೇಶ್, ರಾಚಪ್ಪಾಜಿ, ನಿಂಗರಾಜು, ರಂಗಸ್ವಾಮಿ, ಆರ್.ಮಹದೇವಸ್ವಾಮಿ, ಆಟೋ ಚಾಲಕರ ಸಂಘದ ಅಧ್ಯಕ್ಷ ರಾಜೇಶ್, ಮಹದೇವಸ್ವಾಮಿ, ದೊಡ್ಡಸಿದ್ದಶೆಟ್ಟಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

52 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago

ರಾಜ್ಯದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಆರ್‌.ಅಶೋಕ

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…

2 hours ago