ಚಾಮರಾಜನಗರ

ಹನೂರು: ಬಿಜೆಪಿ ಮುಖಂಡ ನಿಶಾಂತ್‌ಗೆ ಉಪ್ಪಾರ ಸಮುದಾಯದ ಬೆಂಬಲ

ಹನೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ರವರಿಗೆ ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡುತ್ತಿರುವ ಸಮಾಜ ಸೇವೆ, ಮತದಾರರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಅವರಿಗೆ ಬೆಂಬಲ ನೀಡಲಿದ್ದೇವೆ ಎಂದು ಉಪ್ಪಾರ ಸಮುದಾಯದ ಮುಖಂಡ ಚಿಕ್ಕನಂಜ ಶೆಟ್ಟಿ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ಮಧುವನಹಳ್ಳಿ ಗ್ರಾಮದಲ್ಲಿ ಮಾಧ್ಯಮದವರ ಮಾತನಾಡಿದ ಅವರು ಕಳೆದ ಐದು ವರ್ಷಗಳಿಂದ ಯುವ ಮುಖಂಡ ನಿಶಾಂತ್ ರವರು ಸಚಿವರು, ಶಾಸಕರಾಗಿ ಮಾಡುವ ಕೆಲಸವನ್ನು ಅಧಿಕಾರವಿಲ್ಲದೆ ಕ್ಷೇತ್ರದ ಜನರಿಗೆ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇವರಿಗೆ ಕೆಟ್ಟ ಹೆಸರು ತರಲು ಕಾಣದ ಕೈಗಳು ಜಿನಕನಹಳ್ಳಿ ಗ್ರಾಮದಲ್ಲಿ ನಿಶಾಂತ್ ರವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಯಾವುದೋ ವಿಡಿಯೋ ಕಳುಹಿಸಿ ಮಾಧ್ಯಮದಲ್ಲಿ ಬರುವಂತೆ ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಚಾರ ನಿಶಾಂತ್ ರವರು ಪ್ರತಿಯೊಂದು ಹಳ್ಳಿಗೂ ತಮ್ಮದೇ ಆದ ಕೈಲಾದ ಸಹಾಯ ಮಾಡಿದ್ದಾರೆ. ಅಂಗವಿಕಲರು ಮಠಮಾನ್ಯಗಳು, ದೇವಸ್ಥಾನಗಳು ಸಮುದಾಯ ಭವನಗಳು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ ಇವರ ಸೇವೆಯನ್ನು ಮತ್ತಷ್ಟು ಪಡೆಯಬೇಕಾದರೆ ಇವರನ್ನು ಮುಂದಿನ ದಿನಗಳಲ್ಲಿ ನಮ್ಮ ಜನಪ್ರತಿನಿಧಿಯನ್ನಾಗಿ ಮಾಡಲು ಶ್ರಮಿಸುತ್ತೇವೆ ಎಂದರು.

ಇನ್ನು ಪಕ್ಷದ ಮುಖಂಡ ವೃಷಭೇಂದ್ರ ಎಂಬುವವರು ಇವರಿಗೆ ಕೆಟ್ಟ ಹೆಸರು ತರಲು ಮಾಧ್ಯಮಕ್ಕೆ ವಿಡಿಯೋ ಕಳುಹಿಸಿದ್ದಾರೆ. ಇವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದರು.

ಮಧುವನಹಳ್ಳಿ ಗ್ರಾಮದ ಮಹದೇವಸ್ವಾಮಿ ಮಾತನಾಡಿ ಯುವ ಮುಖಂಡ ನಿಶಾಂತ್ ರವರ ಜನಪ್ರಿಯತೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಅವರ ಹೆಸರಿಗೆ ಕೆಟ್ಟ ಹೆಸರು ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮಧುವನಹಳ್ಳಿ ಗ್ರಾಮಕ್ಕೆ 28 ಲಕ್ಷಕ್ಕೂ ಹೆಚ್ಚು ಆರ್ಥಿಕವಾಗಿ ಸಹಾಯ ಮಾಡಿದ್ದಾರೆ. ಅವರಿಗೆ ಋಣಿಯಾಗಿ ಇರಬೇಕಾಗಿರುವುದು ನಮ್ಮ ಕರ್ತವ್ಯ ಮುಂದಿನ ದಿನಗಳಲ್ಲಿ ಆ ದೇವರು ಅವರಿಗೆ ಮತ್ತಷ್ಟು ಅಧಿಕಾರ ಕರುಣಿಸಲಿ, ರಾಜಕೀಯದಲ್ಲಿ ಸಣ್ಣಪುಟ್ಟ ವೈಷಮ್ಯ, ಟೀಕೆ ಟಿಪ್ಪಣಿಗಳು ಬರುವುದು ಸಹಜ ಇದನ್ನೆಲ್ಲವನ್ನು ಮೆಟ್ಟಿ ನಿಂತರೆ ಮಾತ್ರ ನಿಜವಾದ ಜನನಾಯಕನಾಗಲು ಸಾಧ್ಯ ನಿಮ್ಮ ಬೆಂಬಲಕ್ಕೆ ನಾವಿದ್ದೇವೆ ಯಾವುದಕ್ಕೂ ಹೆದರುವುದು ಬೇಡ ನೀವು ನಿಮ್ಮ ಸೇವೆಯನ್ನು ಮುಂದುವರೆಸಿ ಎಂದು ಧೈರ್ಯ ತುಂಬಿದರು.

ಈ ವೇಳೆ ಮಧುವನಹಳ್ಳಿ ಗ್ರಾಮದ ವಿವಿಧ ಸಮುದಾಯದ ಮುಖಂಡರುಗಳಾದ ಕಪ್ಪಣಶೆಟ್ಟರು ಮಾಸ್ಟರ್, ಕೆಂಪಶೆಟ್ರು, ಉತ್ತಮ್, ಮಹೇಶ್, ರಾಚಪ್ಪಾಜಿ, ನಿಂಗರಾಜು, ರಂಗಸ್ವಾಮಿ, ಆರ್.ಮಹದೇವಸ್ವಾಮಿ, ಆಟೋ ಚಾಲಕರ ಸಂಘದ ಅಧ್ಯಕ್ಷ ರಾಜೇಶ್, ಮಹದೇವಸ್ವಾಮಿ, ದೊಡ್ಡಸಿದ್ದಶೆಟ್ಟಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

20 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago