Hanur Villagers struggle for drinking water
ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಾರ್ಡಿನಲ್ಲಿ ಕಳೆದ ಒಂದು ವಾರದಿಂದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಜನರು ಪರಿತಪಿಸುತ್ತಿದ್ದಾರೆ.
ಬಂಡಳ್ಳಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದ ಒಂದನೇ ವಾರ್ಡಿನ ಜೆ.ಎಸ್.ಎಸ್ ಪ್ರೌಢಶಾಲೆಯಿಂದ ಕಾವೇರಿ ಗ್ರಾಮೀಣ ಬ್ಯಾಂಕ್ ಸರ್ಕಲ್ವರೆಗೆ 50ಕ್ಕೂ ಹೆಚ್ಚು ಮನೆಗಳಿದ್ದು ಸುಮಾರು 250ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಆದರೆ ಕಳೆದ ಒಂದು ವಾರದಿಂದ ಸಮರ್ಪಕ ಕುಡಿಯುವ ನೀರಿಲ್ಲದೆ ಹನಿ ಹನಿ ನೀರಿಗೂ ಮಕ್ಕಳು, ಹೆಂಗಸರು, ಅಂಗವಿಕಲರು, ವಯೋವೃದ್ಧರು ಕುಡಿಯುವ ನೀರು ಶೇಖರಣೆ ಮಾಡಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.
ತಡರಾತ್ರಿ ನೀರು ಬಿಡುವ ವಾಟರ್ ಮ್ಯಾನ್: ರಾಜ್ಯದ 224 ಕ್ಷೇತ್ರಗಳಲ್ಲಿ ಪ್ರತಿದಿನ ಬೆಳಗ್ಗೆ ಗ್ರಾಮದ ನಿವಾಸಿಗಳಿಗೆ ನೀರು ಪೂರೈಕೆ ಮಾಡುವುದು ಸಹಜ ಪ್ರಕ್ರಿಯೆ. ಆದರೆ ಬಂಡಳ್ಳಿ ಗ್ರಾಮದಲ್ಲಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿ ನಡೆಯುತ್ತಿದ್ದು ಪ್ರತಿದಿನ ರಾತ್ರಿ 11, 12 ಗಂಟೆಗೆ ನೀರುಗಂಟಿ ನೀರು ಬಿಟ್ಟಾಗ ಇಲ್ಲಿನ ನಿವಾಸಿಗಳು ಬೇರೆ ವಾರ್ಡಿಗೆ ಹೋಗಿ ಕುಡಿಯುವ ನೀರು ಸಂಗ್ರಹಣೆ ಮಾಡಿಕೊಳ್ಳುವಂತಹ ಪರಿಸ್ಥಿತಿ ಬಂದಿದೆ.
ಇನ್ನು ಮುಂದಾದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಜನಪ್ರತಿನಿಧಿಗಳು ವಾರ್ಡಿನ ನಿವಾಸಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…