ಚಾಮರಾಜನಗರ

ಹನೂರು| ಬಹಿರ್ದೆಸೆಗೆ ಹೋಗಿದ್ದ ಯುವಕನ ಮೇಲೆ ಕಾಡಾನೆ ದಾಳಿ

ಹನೂರು: ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ.

ಬೆಂಗಳೂರು ಮೂಲದ ಹರಿಪ್ರಸಾದ್ ಎಂಬುವವನೇ ಮೃತಪಟ್ಟ ಯುವಕನಾಗಿದ್ದಾನೆ.

ಚಂಗಡಿ ಗ್ರಾಮದ ಮಧು ರವರು ಕೆಲಸ ಮಾಡಿಕೊಂಡು ಬೆಂಗಳೂರಿನಲ್ಲಿ ವಾಸವಿದ್ದಾರೆ. ಇವರು ಸ್ನೇಹಿತರ ಜೊತೆ ಚಂಗಡಿ ಗ್ರಾಮಕ್ಕೆ ತೆರಳಿ ಆನಂತರ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಲು ತೀರ್ಮಾನಿಸಿ ಗ್ರಾಮಕ್ಕೆ ಆಗಮಿಸಿದ್ದರು. ಶನಿವಾರ ಸಂಜೆ ಐವರು ಸ್ನೇಹಿತರು ಚಂಗಡಿ ಗ್ರಾಮದ ಕರಿ ಕಲ್ಲು ಕೋರೆಯ ಸಮೀಪ ಬಹಿರ್ದೆಸೆಗೆ ತೆರಳಿದ್ದರು.

ಈ ವೇಳೆ ಹರಿಪ್ರಸಾದ್ ಎಂಬ ಯುವಕ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ ಪರಿಣಾಮ ಹೊಟ್ಟೆ ಕಾಲು, ಹಾಗೂ ಇನ್ನಿತರ ಕಡೆ ತೀವ್ರ ಗಾಯಗಳಾಗಿದ್ದವು. ತಕ್ಷಣ ಸ್ನೇಹಿತರು ಕಾರಿನಲ್ಲಿ ಸಮೀಪದ ಹೋಲಿ ಕ್ರಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಮೈಸೂರಿಗೆ ಕರೆದುಕೊಂಡು ಹೋಗುವಂತೆ ಹೋಲಿ ಕ್ರಾಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ನಂತರ ಸ್ನೇಹಿತರು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರೀಕ್ಷೆ ಮಾಡಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

3 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

4 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

9 hours ago

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

9 hours ago

ಓದುಗರ ಪತ್ರ: ಖಾಸಗಿ ಕಾಲೇಜುಗಳ ಅನಗತ್ಯ ಶುಲ್ಕ ಹೆಚ್ಚಳ ನಿಯಂತ್ರಿಸಿ

ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…

9 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮೂರಡಿಯ ಮೂರ್ತಿಗೆ ಡಾಕ್ಟರಾದ ಕೀರ್ತಿ

ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…

9 hours ago