ಹನೂರು: ತಾಲ್ಲೂಕಿನ ನಾಲ್ರೋಡ್ ಹಾಗೂ ನೆಲ್ಲೂರು ಮಾರ್ಗಮಧ್ಯದ ರಸ್ತೆಯಲ್ಲಿ ಕಾಡಾನೆಯೊಂದು ಹಾಡಹಗಲೇ ರಸ್ತೆ ದಾಟಿ ಹೋಗಿರುವುದು ಪ್ರಯಾಣಿಕರು ಹಾಗೂ ಸುತ್ತಮುತ್ತಲ ಜನರಲ್ಲಿ ಆತಂಕ ಮೂಡಿಸಿದೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಆಗಮಿಸಿದ ಕಾಡಾನೆಯೊಂದು ರಸ್ತೆಯನ್ನು ದಾಟಿದ್ದು, ಈ ಸಮಯದಲ್ಲಿ ಎರಡೂ ಬದಿಗಳಲ್ಲಿ ಬೈಕ್ ಸವಾರರು ಹಾಗೂ ವಾಹನಗಳಲ್ಲಿದ್ದವರು ಕುತೂಹಲದಿಂದ ವಿಡಿಯೋ ಮಾಡಿದ್ದಾರೆ. ಇನ್ನೂ ಕೆಲವರು ಆತಂಕದಲ್ಲಿ ಆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಈ ಸಂಬಂಧ ಸ್ಥಳೀಯರು ಮಾತನಾಡಿ, ಹಾಡಹಗಲೇ ಕಾಡಾನೆ ಮುಖ್ಯ ರಸ್ತೆಯಲ್ಲಿ ಓಡಾಡಿರುವುದು ಭಯ ಉಂಟುಮಾಡಿದೆ. ಬದಲಿ ರಸ್ತೆ ಇಲ್ಲದೆ ಇರುವುದರಿಂದ ಈ ಮಾರ್ಗದಲ್ಲೇ ಸಂಚರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಈ ಭಾಗದ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಯಬೇಕು ಎಂದು ಮನವಿ ಮಾಡಿದ್ದಾರೆ.
ಸಮರ್ಪಕ ಮಳೆಯಾಗದೆ ಇರುವ ಹಿನ್ನೆಲೆಯಲ್ಲಿ ಕೆರೆಕಟ್ಟೆಗಳು ಖಾಲಿಯಾಗಿರುವುದರಿಂದ ಹಾಗೂ ಮರ-ಗಿಡಗಳಲ್ಲಿ ಈಗ ಚಿಗುರು ಬರುತ್ತಿರುವುದರಿಂದ ಆಹಾರದ ಕೊರತೆಯ ಕಾರಣಕ್ಕಾಗಿ ಆನೆ ರಸ್ತೆಗೆ ಬಂದಿರಬಹುದು ಎನ್ನಲಾಗಿದೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…