ಹನೂರು: ತಾಲ್ಲೂಕಿನ ನಾಲ್ರೋಡ್ ಹಾಗೂ ನೆಲ್ಲೂರು ಮಾರ್ಗಮಧ್ಯದ ರಸ್ತೆಯಲ್ಲಿ ಕಾಡಾನೆಯೊಂದು ಹಾಡಹಗಲೇ ರಸ್ತೆ ದಾಟಿ ಹೋಗಿರುವುದು ಪ್ರಯಾಣಿಕರು ಹಾಗೂ ಸುತ್ತಮುತ್ತಲ ಜನರಲ್ಲಿ ಆತಂಕ ಮೂಡಿಸಿದೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಆಗಮಿಸಿದ ಕಾಡಾನೆಯೊಂದು ರಸ್ತೆಯನ್ನು ದಾಟಿದ್ದು, ಈ ಸಮಯದಲ್ಲಿ ಎರಡೂ ಬದಿಗಳಲ್ಲಿ ಬೈಕ್ ಸವಾರರು ಹಾಗೂ ವಾಹನಗಳಲ್ಲಿದ್ದವರು ಕುತೂಹಲದಿಂದ ವಿಡಿಯೋ ಮಾಡಿದ್ದಾರೆ. ಇನ್ನೂ ಕೆಲವರು ಆತಂಕದಲ್ಲಿ ಆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಈ ಸಂಬಂಧ ಸ್ಥಳೀಯರು ಮಾತನಾಡಿ, ಹಾಡಹಗಲೇ ಕಾಡಾನೆ ಮುಖ್ಯ ರಸ್ತೆಯಲ್ಲಿ ಓಡಾಡಿರುವುದು ಭಯ ಉಂಟುಮಾಡಿದೆ. ಬದಲಿ ರಸ್ತೆ ಇಲ್ಲದೆ ಇರುವುದರಿಂದ ಈ ಮಾರ್ಗದಲ್ಲೇ ಸಂಚರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಈ ಭಾಗದ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಯಬೇಕು ಎಂದು ಮನವಿ ಮಾಡಿದ್ದಾರೆ.
ಸಮರ್ಪಕ ಮಳೆಯಾಗದೆ ಇರುವ ಹಿನ್ನೆಲೆಯಲ್ಲಿ ಕೆರೆಕಟ್ಟೆಗಳು ಖಾಲಿಯಾಗಿರುವುದರಿಂದ ಹಾಗೂ ಮರ-ಗಿಡಗಳಲ್ಲಿ ಈಗ ಚಿಗುರು ಬರುತ್ತಿರುವುದರಿಂದ ಆಹಾರದ ಕೊರತೆಯ ಕಾರಣಕ್ಕಾಗಿ ಆನೆ ರಸ್ತೆಗೆ ಬಂದಿರಬಹುದು ಎನ್ನಲಾಗಿದೆ.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…