ಹನೂರು: ತಾಲ್ಲೂಕಿನ ನಾಲ್ರೋಡ್ ಹಾಗೂ ನೆಲ್ಲೂರು ಮಾರ್ಗಮಧ್ಯದ ರಸ್ತೆಯಲ್ಲಿ ಕಾಡಾನೆಯೊಂದು ಹಾಡಹಗಲೇ ರಸ್ತೆ ದಾಟಿ ಹೋಗಿರುವುದು ಪ್ರಯಾಣಿಕರು ಹಾಗೂ ಸುತ್ತಮುತ್ತಲ ಜನರಲ್ಲಿ ಆತಂಕ ಮೂಡಿಸಿದೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಆಗಮಿಸಿದ ಕಾಡಾನೆಯೊಂದು ರಸ್ತೆಯನ್ನು ದಾಟಿದ್ದು, ಈ ಸಮಯದಲ್ಲಿ ಎರಡೂ ಬದಿಗಳಲ್ಲಿ ಬೈಕ್ ಸವಾರರು ಹಾಗೂ ವಾಹನಗಳಲ್ಲಿದ್ದವರು ಕುತೂಹಲದಿಂದ ವಿಡಿಯೋ ಮಾಡಿದ್ದಾರೆ. ಇನ್ನೂ ಕೆಲವರು ಆತಂಕದಲ್ಲಿ ಆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಈ ಸಂಬಂಧ ಸ್ಥಳೀಯರು ಮಾತನಾಡಿ, ಹಾಡಹಗಲೇ ಕಾಡಾನೆ ಮುಖ್ಯ ರಸ್ತೆಯಲ್ಲಿ ಓಡಾಡಿರುವುದು ಭಯ ಉಂಟುಮಾಡಿದೆ. ಬದಲಿ ರಸ್ತೆ ಇಲ್ಲದೆ ಇರುವುದರಿಂದ ಈ ಮಾರ್ಗದಲ್ಲೇ ಸಂಚರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಈ ಭಾಗದ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಯಬೇಕು ಎಂದು ಮನವಿ ಮಾಡಿದ್ದಾರೆ.
ಸಮರ್ಪಕ ಮಳೆಯಾಗದೆ ಇರುವ ಹಿನ್ನೆಲೆಯಲ್ಲಿ ಕೆರೆಕಟ್ಟೆಗಳು ಖಾಲಿಯಾಗಿರುವುದರಿಂದ ಹಾಗೂ ಮರ-ಗಿಡಗಳಲ್ಲಿ ಈಗ ಚಿಗುರು ಬರುತ್ತಿರುವುದರಿಂದ ಆಹಾರದ ಕೊರತೆಯ ಕಾರಣಕ್ಕಾಗಿ ಆನೆ ರಸ್ತೆಗೆ ಬಂದಿರಬಹುದು ಎನ್ನಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…