ಚಾಮರಾಜನಗರ

ಹನೂರು | ಕಾಡಾನೆಗಳ ದಾಂಧಲೆ ; ಮೆಕ್ಕೆಜೋಳ ನಾಶ

ಹನೂರು: ಒಕ್ಕಣೆ ಮಾಡಲು ಕಟಾವು ಮಾಡಿ ಕಣದಲ್ಲಿ ಹಾಕಿದ್ದ ಮೆಕ್ಕೆಜೋಳವನ್ನು ಕಾಡಾನೆಗಳ ಹಿಂಡು ತಿಂದು ನಾಶ ಮಾಡಿರುವ ಘಟನೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಮನ ಕತ್ತರಿ ಗ್ರಾಮದಲ್ಲಿ ನಡೆದಿದೆ.

ರಾಬರ್ಟ್ ಎಂಬವವರ 3 ಎಕರೆ ಜಮೀನನ್ನು ಮಹದೇವಸ್ವಾಮಿ ಎಂಬುವವರು ಗುತ್ತಿಗೆ ಪಡೆದು ಉತ್ತಮವಾಗಿ ಜೋಳದ ಫಸಲನ್ನು ಬೆಳೆದಿದ್ದರು. ಕಳೆದ ಎರಡು ದಿನಗಳಿಂದ ಮಳೆಯಿದ್ದ ಹಿನ್ನೆಲೆ ಜೋಳದ ಫಸಲನ್ನು ಮನೆಯ ಮುಂಭಾಗ ಮೆದೆ ಹಾಕಿದ್ದರು. ಆದರೆ ಸಮೀಪದ ಅರಣ್ಯ ಪ್ರದೇಶದಿಂದ ಮೇವನ್ನರಸಿ ಆಗಮಿಸಿದ ಕಾಡಾನೆಗಳ ಹಿಂಡು ಒಕ್ಕಣೆ ಕಣದಲ್ಲಿದ್ದ ಸುಮಾರು ೧೦ ಕ್ವಿಂಟಾಲ್ ಗೂ ಹೆಚ್ಚು ಜೋಳವನ್ನು ತಿಂದು ನಾಶ ಮಾಡಿದೆ. ನೊಂದ ರೈತ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕಳೆದ ಹಲವಾರು ದಿನಗಳಿಂದ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಕಡಿವಾಣ ಹಾಕುವಂತೆ ಎಷ್ಟೇ ಮನವಿ ಮಾಡಿದ್ದರು ಇದುವರೆಗೂ ಪ್ರಯೋಜನವಾಗಿಲ್ಲ. ಇನ್ನೂ ಮುಂದಾದರೂ ಕಾಡುಪ್ರಾಣಿಗಳ ಉಪಟಳಕ್ಕೆ ಕಡಿವಾಣ ಹಾಕುವಂತೆ ರೈತರು ಮನವಿ ಮಾಡಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಕಷ್ಟಪಟ್ಟು 3 ಎಕರೆ ಜಮೀನಿನಲ್ಲಿ ಜೋಳ ಬೆಳೆಯಲಾಗಿತ್ತು. ಮಳೆ ಇದ್ದ ಹಿನ್ನೆಲೆ ಜೋಳ ಬಿಡಿಸಿರಲಿಲ್ಲ. ಕಾಡಾನೆಗಳ ಹಿಂಡು ಜೋಳದ ಫಸಲು ತಿಂದು ನಾಶ ಮಾಡಿ ಸುಮಾರು ಒಂದು ಲಕ್ಷಕ್ಕೆ ಹೆಚ್ಚು ನಷ್ಟ ಉಂಟು ಮಾಡಿದೆ. ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಇಲಾಖೆಯಿಂದ ಸೂಕ್ತ ಪರಿಹಾರ ಕೊಡಿಸಬೇಕು. ಮಹದೇವಸ್ವಾಮಿ ನೊಂದ ರೈತ

ಆಂದೋಲನ ಡೆಸ್ಕ್

Recent Posts

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

42 mins ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

47 mins ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

52 mins ago

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…

56 mins ago

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

2 hours ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

3 hours ago