ಹನೂರು: ಒಕ್ಕಣೆ ಮಾಡಲು ಕಟಾವು ಮಾಡಿ ಕಣದಲ್ಲಿ ಹಾಕಿದ್ದ ಮೆಕ್ಕೆಜೋಳವನ್ನು ಕಾಡಾನೆಗಳ ಹಿಂಡು ತಿಂದು ನಾಶ ಮಾಡಿರುವ ಘಟನೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಮನ ಕತ್ತರಿ ಗ್ರಾಮದಲ್ಲಿ ನಡೆದಿದೆ.
ರಾಬರ್ಟ್ ಎಂಬವವರ 3 ಎಕರೆ ಜಮೀನನ್ನು ಮಹದೇವಸ್ವಾಮಿ ಎಂಬುವವರು ಗುತ್ತಿಗೆ ಪಡೆದು ಉತ್ತಮವಾಗಿ ಜೋಳದ ಫಸಲನ್ನು ಬೆಳೆದಿದ್ದರು. ಕಳೆದ ಎರಡು ದಿನಗಳಿಂದ ಮಳೆಯಿದ್ದ ಹಿನ್ನೆಲೆ ಜೋಳದ ಫಸಲನ್ನು ಮನೆಯ ಮುಂಭಾಗ ಮೆದೆ ಹಾಕಿದ್ದರು. ಆದರೆ ಸಮೀಪದ ಅರಣ್ಯ ಪ್ರದೇಶದಿಂದ ಮೇವನ್ನರಸಿ ಆಗಮಿಸಿದ ಕಾಡಾನೆಗಳ ಹಿಂಡು ಒಕ್ಕಣೆ ಕಣದಲ್ಲಿದ್ದ ಸುಮಾರು ೧೦ ಕ್ವಿಂಟಾಲ್ ಗೂ ಹೆಚ್ಚು ಜೋಳವನ್ನು ತಿಂದು ನಾಶ ಮಾಡಿದೆ. ನೊಂದ ರೈತ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಕಳೆದ ಹಲವಾರು ದಿನಗಳಿಂದ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಕಡಿವಾಣ ಹಾಕುವಂತೆ ಎಷ್ಟೇ ಮನವಿ ಮಾಡಿದ್ದರು ಇದುವರೆಗೂ ಪ್ರಯೋಜನವಾಗಿಲ್ಲ. ಇನ್ನೂ ಮುಂದಾದರೂ ಕಾಡುಪ್ರಾಣಿಗಳ ಉಪಟಳಕ್ಕೆ ಕಡಿವಾಣ ಹಾಕುವಂತೆ ರೈತರು ಮನವಿ ಮಾಡಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಕಷ್ಟಪಟ್ಟು 3 ಎಕರೆ ಜಮೀನಿನಲ್ಲಿ ಜೋಳ ಬೆಳೆಯಲಾಗಿತ್ತು. ಮಳೆ ಇದ್ದ ಹಿನ್ನೆಲೆ ಜೋಳ ಬಿಡಿಸಿರಲಿಲ್ಲ. ಕಾಡಾನೆಗಳ ಹಿಂಡು ಜೋಳದ ಫಸಲು ತಿಂದು ನಾಶ ಮಾಡಿ ಸುಮಾರು ಒಂದು ಲಕ್ಷಕ್ಕೆ ಹೆಚ್ಚು ನಷ್ಟ ಉಂಟು ಮಾಡಿದೆ. ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಇಲಾಖೆಯಿಂದ ಸೂಕ್ತ ಪರಿಹಾರ ಕೊಡಿಸಬೇಕು. ಮಹದೇವಸ್ವಾಮಿ ನೊಂದ ರೈತ
ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ…
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…