ಹನೂರು: ಒಕ್ಕಣೆ ಮಾಡಲು ಕಟಾವು ಮಾಡಿ ಕಣದಲ್ಲಿ ಹಾಕಿದ್ದ ಮೆಕ್ಕೆಜೋಳವನ್ನು ಕಾಡಾನೆಗಳ ಹಿಂಡು ತಿಂದು ನಾಶ ಮಾಡಿರುವ ಘಟನೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಮನ ಕತ್ತರಿ ಗ್ರಾಮದಲ್ಲಿ ನಡೆದಿದೆ.
ರಾಬರ್ಟ್ ಎಂಬವವರ 3 ಎಕರೆ ಜಮೀನನ್ನು ಮಹದೇವಸ್ವಾಮಿ ಎಂಬುವವರು ಗುತ್ತಿಗೆ ಪಡೆದು ಉತ್ತಮವಾಗಿ ಜೋಳದ ಫಸಲನ್ನು ಬೆಳೆದಿದ್ದರು. ಕಳೆದ ಎರಡು ದಿನಗಳಿಂದ ಮಳೆಯಿದ್ದ ಹಿನ್ನೆಲೆ ಜೋಳದ ಫಸಲನ್ನು ಮನೆಯ ಮುಂಭಾಗ ಮೆದೆ ಹಾಕಿದ್ದರು. ಆದರೆ ಸಮೀಪದ ಅರಣ್ಯ ಪ್ರದೇಶದಿಂದ ಮೇವನ್ನರಸಿ ಆಗಮಿಸಿದ ಕಾಡಾನೆಗಳ ಹಿಂಡು ಒಕ್ಕಣೆ ಕಣದಲ್ಲಿದ್ದ ಸುಮಾರು ೧೦ ಕ್ವಿಂಟಾಲ್ ಗೂ ಹೆಚ್ಚು ಜೋಳವನ್ನು ತಿಂದು ನಾಶ ಮಾಡಿದೆ. ನೊಂದ ರೈತ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಕಳೆದ ಹಲವಾರು ದಿನಗಳಿಂದ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಕಡಿವಾಣ ಹಾಕುವಂತೆ ಎಷ್ಟೇ ಮನವಿ ಮಾಡಿದ್ದರು ಇದುವರೆಗೂ ಪ್ರಯೋಜನವಾಗಿಲ್ಲ. ಇನ್ನೂ ಮುಂದಾದರೂ ಕಾಡುಪ್ರಾಣಿಗಳ ಉಪಟಳಕ್ಕೆ ಕಡಿವಾಣ ಹಾಕುವಂತೆ ರೈತರು ಮನವಿ ಮಾಡಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಕಷ್ಟಪಟ್ಟು 3 ಎಕರೆ ಜಮೀನಿನಲ್ಲಿ ಜೋಳ ಬೆಳೆಯಲಾಗಿತ್ತು. ಮಳೆ ಇದ್ದ ಹಿನ್ನೆಲೆ ಜೋಳ ಬಿಡಿಸಿರಲಿಲ್ಲ. ಕಾಡಾನೆಗಳ ಹಿಂಡು ಜೋಳದ ಫಸಲು ತಿಂದು ನಾಶ ಮಾಡಿ ಸುಮಾರು ಒಂದು ಲಕ್ಷಕ್ಕೆ ಹೆಚ್ಚು ನಷ್ಟ ಉಂಟು ಮಾಡಿದೆ. ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಇಲಾಖೆಯಿಂದ ಸೂಕ್ತ ಪರಿಹಾರ ಕೊಡಿಸಬೇಕು. ಮಹದೇವಸ್ವಾಮಿ ನೊಂದ ರೈತ
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…