ಚಾಮರಾಜನಗರ

ಹನೂರು | ಕಾಡಾನೆಗಳ ದಾಂಧಲೆ ; ಮೆಕ್ಕೆಜೋಳ ನಾಶ

ಹನೂರು: ಒಕ್ಕಣೆ ಮಾಡಲು ಕಟಾವು ಮಾಡಿ ಕಣದಲ್ಲಿ ಹಾಕಿದ್ದ ಮೆಕ್ಕೆಜೋಳವನ್ನು ಕಾಡಾನೆಗಳ ಹಿಂಡು ತಿಂದು ನಾಶ ಮಾಡಿರುವ ಘಟನೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಮನ ಕತ್ತರಿ ಗ್ರಾಮದಲ್ಲಿ ನಡೆದಿದೆ.

ರಾಬರ್ಟ್ ಎಂಬವವರ 3 ಎಕರೆ ಜಮೀನನ್ನು ಮಹದೇವಸ್ವಾಮಿ ಎಂಬುವವರು ಗುತ್ತಿಗೆ ಪಡೆದು ಉತ್ತಮವಾಗಿ ಜೋಳದ ಫಸಲನ್ನು ಬೆಳೆದಿದ್ದರು. ಕಳೆದ ಎರಡು ದಿನಗಳಿಂದ ಮಳೆಯಿದ್ದ ಹಿನ್ನೆಲೆ ಜೋಳದ ಫಸಲನ್ನು ಮನೆಯ ಮುಂಭಾಗ ಮೆದೆ ಹಾಕಿದ್ದರು. ಆದರೆ ಸಮೀಪದ ಅರಣ್ಯ ಪ್ರದೇಶದಿಂದ ಮೇವನ್ನರಸಿ ಆಗಮಿಸಿದ ಕಾಡಾನೆಗಳ ಹಿಂಡು ಒಕ್ಕಣೆ ಕಣದಲ್ಲಿದ್ದ ಸುಮಾರು ೧೦ ಕ್ವಿಂಟಾಲ್ ಗೂ ಹೆಚ್ಚು ಜೋಳವನ್ನು ತಿಂದು ನಾಶ ಮಾಡಿದೆ. ನೊಂದ ರೈತ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕಳೆದ ಹಲವಾರು ದಿನಗಳಿಂದ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಕಡಿವಾಣ ಹಾಕುವಂತೆ ಎಷ್ಟೇ ಮನವಿ ಮಾಡಿದ್ದರು ಇದುವರೆಗೂ ಪ್ರಯೋಜನವಾಗಿಲ್ಲ. ಇನ್ನೂ ಮುಂದಾದರೂ ಕಾಡುಪ್ರಾಣಿಗಳ ಉಪಟಳಕ್ಕೆ ಕಡಿವಾಣ ಹಾಕುವಂತೆ ರೈತರು ಮನವಿ ಮಾಡಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಕಷ್ಟಪಟ್ಟು 3 ಎಕರೆ ಜಮೀನಿನಲ್ಲಿ ಜೋಳ ಬೆಳೆಯಲಾಗಿತ್ತು. ಮಳೆ ಇದ್ದ ಹಿನ್ನೆಲೆ ಜೋಳ ಬಿಡಿಸಿರಲಿಲ್ಲ. ಕಾಡಾನೆಗಳ ಹಿಂಡು ಜೋಳದ ಫಸಲು ತಿಂದು ನಾಶ ಮಾಡಿ ಸುಮಾರು ಒಂದು ಲಕ್ಷಕ್ಕೆ ಹೆಚ್ಚು ನಷ್ಟ ಉಂಟು ಮಾಡಿದೆ. ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಇಲಾಖೆಯಿಂದ ಸೂಕ್ತ ಪರಿಹಾರ ಕೊಡಿಸಬೇಕು. ಮಹದೇವಸ್ವಾಮಿ ನೊಂದ ರೈತ

ಆಂದೋಲನ ಡೆಸ್ಕ್

Recent Posts

ದೆಹಲಿಯಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…

46 mins ago

ರಾಜ್ಯದಲ್ಲಿ ಮತ್ತಷ್ಟು ತಗ್ಗಲಿದೆ ಮಳೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…

2 hours ago

ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಎಚ್ಚರಿಕೆ

ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…

3 hours ago

ಓದುಗರ ಪತ್ರ: ಸಚಿವರಿಬ್ಬರ ಹೇಳಿಕೆಗಳು ‘ಲಕ್ಷ್ಮಣರೇಖೆ’ ಮೀರದಿರಲಿ

ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…

8 hours ago

ಓದುಗರ ಪತ್ರ: ‘ಸಂಧ್ಯಾ ಕಿರಣ’ ಯೋಜನೆಯ ವ್ಯಾಪ್ತಿಗೆ ವಯೋನಿಗದಿ ಬೇಡ

ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…

8 hours ago

ಓದುಗರ ಪತ್ರ: ಗುರು-ಶಿಷ್ಯರ ಸಂಬಂಧ ವರ್ಣನಾತೀತ

ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…

8 hours ago