ಚಾಮರಾಜನಗರ

ಹನೂರ | ಅಗ್ನಿ ಅವಘಡ ಹತೋಟಿ ಕುರಿತು ಪ್ರಾತ್ಯಾಕ್ಷಿಕೆ

ಹನೂರು : ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಬೆಂಕಿಯನ್ನು ಯಾವ ರೀತಿ ಹತೋಟಿಗೆ ತರಬೇಕು ಎಂಬುದರ ಬಗ್ಗೆ ಗೃಹರಕ್ಷಕ ದಳದ ಸಿಬ್ಬಂದಿಗೆ ಅಗ್ನಿಶಾಮಕ ಠಾಣಾ ವತಿಯಿಂದ ಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸ ನೀಡಲಾಯಿತು.

ಅಗ್ನಿಶಾಮಕ ಪ್ರಭಾರ ಠಾಣಾಧಿಕಾರಿ ಮಹೇಶ್ ಮಾತನಾಡಿ, ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದಾಗ, ಗೃಹಬಳಕೆ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳನ್ನು ಬಳಕೆ ಮಾಡುವಾಗ ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಮೊದಲು ಬೆಂಕಿ ಹರಡದಂತೆ ಹತೋಟಿಗೆ ತರಬೇಕು. ಸಾಮಾನ್ಯ ಬೆಂಕಿ ಅವಘಡಗಳು ಸಂಭವಿಸಿದಾಗ ಹಸಿರು ಸೊಪ್ಪಿನಿಂದ ಬೆಂಕಿಯನ್ನು ಹತೋಟಿಗೆ ತರಬಹುದು. ಕೆಲವೊಮ್ಮೆ ಸಿಲಿಂಡರ್‌ನಲ್ಲಿ ಬೆಂಕಿ ಹೊತ್ತಿಕೊಂಡಾಗ ಎದೆಗುಂದದೆ ಬೆಂಕಿ ಹರಡದಂತೆ ಬಕೆಟ್‌ನಿಂದ ಮುಚ್ಚಬೇಕು, ಸಾಧ್ಯವಾದರೆ ಸಂಪರ್ಕವನ್ನು ನಿಲುಗಡೆ ಮಾಡಬೇಕು ಎಂದು ತಿಳಿಸಿದರು.

ಈ ವೇಳೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಾದ ಲಿಂಗೇಶ್, ಬಸವರಾಜು, ಮನೋಹರ್, ಗೃಹರಕ್ಷಕ ಘಟಕ ಅಧಿಕಾರಿ ರಮೇಶ್, ನಾಗರಾಜು, ಸಿಬ್ಬಂದಿ ವರ್ಗದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago