ಚಾಮರಾಜನಗರ

ಹನೂರು: ಸಿಡಿಮದ್ದು ಸಿಡಿದು ಕರಡಿ ಸಾವು

ಹನೂರು: ಕಾಡುಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಸಿಡಿದು ಕರಡಿಯ ಬಾಯಿ ಛಿದ್ರಗೊಂಡು ಮೃತಪಟ್ಟಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೆಳ್ಳನೂರು ಗ್ರಾಮದ ಬಳಿ ನಡೆದಿದೆ.

ಕಾಡಿನಿಂದ ಮೇವು ಹಾಗೂ ನೀರು ಅರಸಿ ನಾಡಿನತ್ತ ಬಂದಿದ್ದ ಕರಡಿಯೊಂದು ತೆಳ್ಳನೂರಿನ ಅರಣ್ಯ ಪ್ರದೇಶದ ಸಮೀಪದಲ್ಲಿರುವ ಜಮೀನುಗಳ ರಸ್ತೆಯಲ್ಲಿ ತೆರಳುತ್ತಿದ್ದಾಗ ಆಹಾರದ ಜೊತೆ ಇದ್ದ ಸ್ಫೋಟಕಕ್ಕೆ ಬಾಯಿ ಹಾಕಿ ತಿನ್ನಲು ಮುಂದಾಗಿದೆ.

ಈ ವೇಳೆ ಸ್ಫೋಟಕ ಸಿಡಿದು ಕರಡಿಯ ಬಾಯಿ ಛಿದ್ರಗೊಂಡಿದ್ದು ಕೆಲಕಾಲ ಕರಡಿ ನರಳಾಡಿ ಮೃತಪಟ್ಟಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಸಿಡಿಮದ್ದು ಸಿಡಿದು ಜಾನುವಾರುಗಳು ಮೃತಪಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಇದೀಗ ಕಾಡುಪ್ರಾಣಿಯೊಂದು ಸಿಡಿಮದ್ದಿಗೆ ಬಲಿಯಾಗಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.

ಘಟನಾ ಸ್ಥಳಕ್ಕೆ ಕಾವೇರಿ ವನ್ಯಜೀವಿ ವಿಭಾಗದ ಸಹಾಯಕ ಸಂರಕ್ಷಣಾಧಿಕಾರಿ ಮರಿಸ್ವಾಮಿ, ಆರ್‌ಎಫ್‌ಒ ಸುಂದರ್, ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಶುವೈದ್ಯಾಧಿಕಾರಿಗಳು ಕರಡಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

48 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

54 mins ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

59 mins ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

1 hour ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

11 hours ago