ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ ಒಂದು ತಿಂಗಳು ಒಳಗೆ ಬಸ್ ಡಿಪೋ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಹನೂರು ತಾಲೂಕಿನ ಒಡಕೆ ಹಳ್ಳ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನೂರು ತಾಲೂಕು ಕೇಂದ್ರದಲ್ಲಿ ಬಸ್ ಡಿಪೋ ಇಲ್ಲದೆ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈಗಾಗಲೇ ಬಸ್ ಡಿಪೋ ನಿರ್ಮಾಣ ಮಾಡಲು ನಿವೇಶನ ಗುರುತಿಸಲಾಗಿದೆ. ನಿಗಮಕ್ಕೆ ಹಸ್ತಾಂತರ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಪೂರ್ಣಗೊಂಡ ನಂತರ ಬಸ್ ಡಿಪೋ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದರು.
ಹನೂರು ತಾಲ್ಲೂಕು ಕೇಂದ್ರದಲ್ಲಿ ಪ್ರಜಾಸೌಧ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಪೂರ್ಣಗೊಂಡ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು. ಪಟ್ಟಣ ಪಂಚಾಯಿತಿ ತಾಲೂಕು ಪಂಚಾಯಿತಿ ಕಚೇರಿ ನಿರ್ಮಾಣ ಮಾಡಲು ಈಗಾಗಲೇ ಕ್ರಮವಹಿಸಲಾಗಿದ್ದು ನಿವೇಶನ ಗುರುತಿಸಲಾಗಿದೆ ಅನುದಾನ ಬಿಡುಗಡೆಯಾದ ನಂತರ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…