ಮಹಾದೇಶ್ ಎಂ ಗೌಡ
ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನ ಕಾಲು ಮುರಿದಿರುವ ಘಟನೆ ಜರುಗಿದೆ.
ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲ್ಲಿಪಾಳ್ಯ ಗ್ರಾಮದ ರೈತ ಚಿನ್ನಪ್ಪ ಆನೆ ದಾಳಿಗೆ ಒಳಗಾಗಿ ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.
ಘಟನೆ ವಿವರ: ರೈತ ಚಿನ್ನಪ್ಪ ತನ್ನ ಜಮೀನಿನಲ್ಲಿ ಬೆಳೆದಿರುವ ಜೋಳದ ಫಸಲನ್ನು ಎಂದಿನಂತೆ ಕಾವಲು ಕಾಯಲು ತೆರಳಿದ್ದ. ಭಾನುವಾರ ತಡರಾತ್ರಿ ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಯೊಂದು ಜೋಳದ ಫಸಲು ನಾಶ ಮಾಡಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ರೈತನ ಎಡ ಕಾಲು ಮುರಿದಿದೆ. ಕಿರಾಡಿಕೊಂಡು ಕಷ್ಟಪಟ್ಟು ದೂರ ಸರಿದು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಕುಟುಂಬಸ್ಥರು ತಮಿಳುನಾಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಮಾಡಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ಜದ್ ಖಾನ್ ಹಾಗೂ ರೈತ ಮುಖಂಡರುಗಳು ಆಸ್ಪತ್ರೆಗೆ ಭೇಟಿ ನೀಡಿ ರೈತರಿಗೆ ಸಾಂತ್ವನ ತಿಳಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಘಟನೆಯ ಮಾಹಿತಿ ಪಡೆದ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಜಿತೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.
ಈ ವೇಳೆ ಸ್ಥಳೀಯ ರೈತ ಮುಖಂಡರು ಮಾತನಾಡಿ, ಕಳೆದ ಒಂದು ತಿಂಗಳ ಅವಧಿಯಲ್ಲಿ ಈ ಪ್ರದೇಶದಲ್ಲಿ ಕಾಡಾನೆ ದಾಳಿಯಿಂದ ಒಬ್ಬರು ಮೃತಪಟ್ಟಿದ್ದು, ಮೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಆನೆಗಳ ಚಲನವಲನದ ಮಾಹಿತಿ ಪಡೆದುಕೊಂಡು ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು, ಆನೆ ಕಾರಿಡಾರ್ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಸಿದ್ದಾಪುರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರಿಗೆ ನ್ಯಾಯಾಲಯ ಹಾಗೂ ಬಾಲ…
ಬೆಂಗಳೂರು : ಆರ್ಎಸ್ಎಸ್ ಸಂಘಟನೆಯ ಕಾರ್ಯವೈಖರಿ ಹಾಗೂ ವಿದೇಶದಲ್ಲಿನ ಅದರ ಚಟುವಟಿಕೆಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ…
ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…
ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಸಿಐಡಿ…
ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…