ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಆನಧಿಕೃತವಾಗಿ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಹಾಗೂ ಸಿಬ್ಬಂದಿ ಇಂದು ಬೆಳಗ್ಗೆ ಕಾರ್ಯಚರಣೆ ಕೈಗೊಂಡು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರ ಸಮೀಪ 40 ಮಳಿಗೆಗಳಿದ್ದು, 18 ಜನರು ನಿಯಮಾನುಸಾರ ಟೆಂಡರ್ ಪಡೆದು ಲಕ್ಷಾಂತರ ರೂಪಾಯಿ ಬಾಡಿಗೆ ಕಟ್ಟಿ ಅಂಗಡಿ ನಡೆಸುತ್ತಿದ್ದರು. ಆದರೆ 21 ಮಳಿಗೆದಾರರು ಕಳೆದ ಎಂಟು ವರ್ಷಗಳಿಂದ ಅನಧಿಕೃತವಾಗಿ ಮಳಿಗೆಗಳನ್ನು ನಡೆಸುತ್ತಾ ಪ್ರಾಧಿಕಾರದ ನೂರಾರು ಕೋಟಿ ಆದಾಯಕ್ಕೆ ಕುತ್ತು ತಂದಿದ್ದರು.
ಆದರೆ ಇದುವರೆಗೂ ಕರ್ತವ್ಯ ನಿರ್ವಹಿಸಿದ್ದ ಕಾರ್ಯದರ್ಶಿಗಳು ತೆರವು ಮಾಡಲು ಮನಸ್ಸು ಮಾಡಿರಲಿಲ್ಲ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೂ ಗ್ರಾಸವಾಗಿತ್ತು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರಕ್ಕೆ ನಷ್ಟವಾಗುತ್ತಿರುವ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘುರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ಮಾಡಿ ಹೈಕೋರ್ಟ್ನಲ್ಲಿ ಕೆವಿಟ್ ಹಾಕಿ ಹಲವು ರಾಜಕೀಯ ಒತ್ತಡದ ನಡುವೆಯೂ ಕಳೆದ ವಾರ 21 ಅಂಗಡಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿಸಿದ್ದರು.
ಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಅನಧಿಕೃತವಾಗಿಟ್ಟುಕೊಂಡಿದ್ದ ಮಳಿಗೆದಾರರು ಅಂಗಡಿಗಳನ್ನು ತೆರವು ಮಾಡದೆ ಇದ್ದಿದ್ದರಿಂದ ಇಂದು ಬೆಳಗ್ಗೆ ಪೊಲೀಸರು, ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಸಹಯೋಗದಲ್ಲಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಇದರಿಂದ ಕಳೆದ ಎಂಟು ವರ್ಷಗಳಿಂದ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ತೆರೆ ಬಿದ್ದಿದೆ.
ಕಳೆದ ಹಲವಾರು ವರ್ಷಗಳಿಂದ 21 ಮಳಿಗೆದಾರರು ಅನಧಿಕೃತವಾಗಿ ವ್ಯಾಪಾರ ಮಾಡುತ್ತಿದ್ದರು. ಇದರಿಂದ ಪ್ರಾಧಿಕಾರಕ್ಕೆ ನಷ್ಟ ಉಂಟಾಗಿದ್ದು, ಈ ಸಂಬಂಧ ಇದ್ದ ಸಮಸ್ಯೆಯನ್ನು ಬಗೆಹರಿಸಿ ಕಳೆದ ವಾರ 21 ಅಂಗಡಿಗಳನ್ನು 11 ತಿಂಗಳ ಅವಧಿಗೆ ೨.೩೪ ಕೋಟಿಗೆ ಹರಾಜು ಮಾಡಲಾಗಿದೆ. ಪ್ರಾಧಿಕಾರದ ಆಸ್ತಿ ಹಾಗೂ ಆದಾಯವನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಅದನ್ನು ನಿಭಾಯಿಸಿದ್ದೇನೆ ಎಂದು ಎಈ ರಘು ಸಂತಸ ವ್ಯಕ್ತಪಡಿಸಿದ್ದಾರೆ.
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…