ಚಾಮರಾಜನಗರ

ಹನೂರು| ಮಲೆ ಮಹದೇಶ್ವರ ಬೆಟ್ಟದಲ್ಲಿ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಆನಧಿಕೃತವಾಗಿ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಹಾಗೂ ಸಿಬ್ಬಂದಿ ಇಂದು ಬೆಳಗ್ಗೆ ಕಾರ್ಯಚರಣೆ ಕೈಗೊಂಡು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರ ಸಮೀಪ 40 ಮಳಿಗೆಗಳಿದ್ದು, 18 ಜನರು ನಿಯಮಾನುಸಾರ ಟೆಂಡರ್ ಪಡೆದು ಲಕ್ಷಾಂತರ ರೂಪಾಯಿ ಬಾಡಿಗೆ ಕಟ್ಟಿ ಅಂಗಡಿ ನಡೆಸುತ್ತಿದ್ದರು. ಆದರೆ 21 ಮಳಿಗೆದಾರರು ಕಳೆದ ಎಂಟು ವರ್ಷಗಳಿಂದ ಅನಧಿಕೃತವಾಗಿ ಮಳಿಗೆಗಳನ್ನು ನಡೆಸುತ್ತಾ ಪ್ರಾಧಿಕಾರದ ನೂರಾರು ಕೋಟಿ ಆದಾಯಕ್ಕೆ ಕುತ್ತು ತಂದಿದ್ದರು.

ಆದರೆ ಇದುವರೆಗೂ ಕರ್ತವ್ಯ ನಿರ್ವಹಿಸಿದ್ದ ಕಾರ್ಯದರ್ಶಿಗಳು ತೆರವು ಮಾಡಲು ಮನಸ್ಸು ಮಾಡಿರಲಿಲ್ಲ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೂ ಗ್ರಾಸವಾಗಿತ್ತು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರಕ್ಕೆ ನಷ್ಟವಾಗುತ್ತಿರುವ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘುರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ಮಾಡಿ ಹೈಕೋರ್ಟ್‌ನಲ್ಲಿ ಕೆವಿಟ್ ಹಾಕಿ ಹಲವು ರಾಜಕೀಯ ಒತ್ತಡದ ನಡುವೆಯೂ ಕಳೆದ ವಾರ 21 ಅಂಗಡಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿಸಿದ್ದರು.

ಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಅನಧಿಕೃತವಾಗಿಟ್ಟುಕೊಂಡಿದ್ದ ಮಳಿಗೆದಾರರು ಅಂಗಡಿಗಳನ್ನು ತೆರವು ಮಾಡದೆ ಇದ್ದಿದ್ದರಿಂದ ಇಂದು ಬೆಳಗ್ಗೆ ಪೊಲೀಸರು, ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಸಹಯೋಗದಲ್ಲಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಇದರಿಂದ ಕಳೆದ ಎಂಟು ವರ್ಷಗಳಿಂದ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ತೆರೆ ಬಿದ್ದಿದೆ.

ಕಳೆದ ಹಲವಾರು ವರ್ಷಗಳಿಂದ 21 ಮಳಿಗೆದಾರರು ಅನಧಿಕೃತವಾಗಿ ವ್ಯಾಪಾರ ಮಾಡುತ್ತಿದ್ದರು. ಇದರಿಂದ ಪ್ರಾಧಿಕಾರಕ್ಕೆ ನಷ್ಟ ಉಂಟಾಗಿದ್ದು, ಈ ಸಂಬಂಧ ಇದ್ದ ಸಮಸ್ಯೆಯನ್ನು ಬಗೆಹರಿಸಿ ಕಳೆದ ವಾರ 21 ಅಂಗಡಿಗಳನ್ನು 11 ತಿಂಗಳ ಅವಧಿಗೆ ೨.೩೪ ಕೋಟಿಗೆ ಹರಾಜು ಮಾಡಲಾಗಿದೆ. ಪ್ರಾಧಿಕಾರದ ಆಸ್ತಿ ಹಾಗೂ ಆದಾಯವನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಅದನ್ನು ನಿಭಾಯಿಸಿದ್ದೇನೆ ಎಂದು ಎಈ ರಘು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 mins ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

49 mins ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

1 hour ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

1 hour ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

2 hours ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

2 hours ago