ಚಾಮರಾಜನಗರ

ಹನೂರು| ಮಲೆ ಮಹದೇಶ್ವರ ಬೆಟ್ಟದಲ್ಲಿ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಆನಧಿಕೃತವಾಗಿ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಹಾಗೂ ಸಿಬ್ಬಂದಿ ಇಂದು ಬೆಳಗ್ಗೆ ಕಾರ್ಯಚರಣೆ ಕೈಗೊಂಡು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರ ಸಮೀಪ 40 ಮಳಿಗೆಗಳಿದ್ದು, 18 ಜನರು ನಿಯಮಾನುಸಾರ ಟೆಂಡರ್ ಪಡೆದು ಲಕ್ಷಾಂತರ ರೂಪಾಯಿ ಬಾಡಿಗೆ ಕಟ್ಟಿ ಅಂಗಡಿ ನಡೆಸುತ್ತಿದ್ದರು. ಆದರೆ 21 ಮಳಿಗೆದಾರರು ಕಳೆದ ಎಂಟು ವರ್ಷಗಳಿಂದ ಅನಧಿಕೃತವಾಗಿ ಮಳಿಗೆಗಳನ್ನು ನಡೆಸುತ್ತಾ ಪ್ರಾಧಿಕಾರದ ನೂರಾರು ಕೋಟಿ ಆದಾಯಕ್ಕೆ ಕುತ್ತು ತಂದಿದ್ದರು.

ಆದರೆ ಇದುವರೆಗೂ ಕರ್ತವ್ಯ ನಿರ್ವಹಿಸಿದ್ದ ಕಾರ್ಯದರ್ಶಿಗಳು ತೆರವು ಮಾಡಲು ಮನಸ್ಸು ಮಾಡಿರಲಿಲ್ಲ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೂ ಗ್ರಾಸವಾಗಿತ್ತು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರಕ್ಕೆ ನಷ್ಟವಾಗುತ್ತಿರುವ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘುರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ಮಾಡಿ ಹೈಕೋರ್ಟ್‌ನಲ್ಲಿ ಕೆವಿಟ್ ಹಾಕಿ ಹಲವು ರಾಜಕೀಯ ಒತ್ತಡದ ನಡುವೆಯೂ ಕಳೆದ ವಾರ 21 ಅಂಗಡಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿಸಿದ್ದರು.

ಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಅನಧಿಕೃತವಾಗಿಟ್ಟುಕೊಂಡಿದ್ದ ಮಳಿಗೆದಾರರು ಅಂಗಡಿಗಳನ್ನು ತೆರವು ಮಾಡದೆ ಇದ್ದಿದ್ದರಿಂದ ಇಂದು ಬೆಳಗ್ಗೆ ಪೊಲೀಸರು, ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಸಹಯೋಗದಲ್ಲಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಇದರಿಂದ ಕಳೆದ ಎಂಟು ವರ್ಷಗಳಿಂದ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ತೆರೆ ಬಿದ್ದಿದೆ.

ಕಳೆದ ಹಲವಾರು ವರ್ಷಗಳಿಂದ 21 ಮಳಿಗೆದಾರರು ಅನಧಿಕೃತವಾಗಿ ವ್ಯಾಪಾರ ಮಾಡುತ್ತಿದ್ದರು. ಇದರಿಂದ ಪ್ರಾಧಿಕಾರಕ್ಕೆ ನಷ್ಟ ಉಂಟಾಗಿದ್ದು, ಈ ಸಂಬಂಧ ಇದ್ದ ಸಮಸ್ಯೆಯನ್ನು ಬಗೆಹರಿಸಿ ಕಳೆದ ವಾರ 21 ಅಂಗಡಿಗಳನ್ನು 11 ತಿಂಗಳ ಅವಧಿಗೆ ೨.೩೪ ಕೋಟಿಗೆ ಹರಾಜು ಮಾಡಲಾಗಿದೆ. ಪ್ರಾಧಿಕಾರದ ಆಸ್ತಿ ಹಾಗೂ ಆದಾಯವನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಅದನ್ನು ನಿಭಾಯಿಸಿದ್ದೇನೆ ಎಂದು ಎಈ ರಘು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

20 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

20 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

20 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

20 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

20 hours ago