ಚಾಮರಾಜನಗರ

ಹನೂರು| ಮಲೆ ಮಹದೇಶ್ವರ ಬೆಟ್ಟದಲ್ಲಿ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಆನಧಿಕೃತವಾಗಿ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಹಾಗೂ ಸಿಬ್ಬಂದಿ ಇಂದು ಬೆಳಗ್ಗೆ ಕಾರ್ಯಚರಣೆ ಕೈಗೊಂಡು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರ ಸಮೀಪ 40 ಮಳಿಗೆಗಳಿದ್ದು, 18 ಜನರು ನಿಯಮಾನುಸಾರ ಟೆಂಡರ್ ಪಡೆದು ಲಕ್ಷಾಂತರ ರೂಪಾಯಿ ಬಾಡಿಗೆ ಕಟ್ಟಿ ಅಂಗಡಿ ನಡೆಸುತ್ತಿದ್ದರು. ಆದರೆ 21 ಮಳಿಗೆದಾರರು ಕಳೆದ ಎಂಟು ವರ್ಷಗಳಿಂದ ಅನಧಿಕೃತವಾಗಿ ಮಳಿಗೆಗಳನ್ನು ನಡೆಸುತ್ತಾ ಪ್ರಾಧಿಕಾರದ ನೂರಾರು ಕೋಟಿ ಆದಾಯಕ್ಕೆ ಕುತ್ತು ತಂದಿದ್ದರು.

ಆದರೆ ಇದುವರೆಗೂ ಕರ್ತವ್ಯ ನಿರ್ವಹಿಸಿದ್ದ ಕಾರ್ಯದರ್ಶಿಗಳು ತೆರವು ಮಾಡಲು ಮನಸ್ಸು ಮಾಡಿರಲಿಲ್ಲ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೂ ಗ್ರಾಸವಾಗಿತ್ತು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರಕ್ಕೆ ನಷ್ಟವಾಗುತ್ತಿರುವ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘುರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ಮಾಡಿ ಹೈಕೋರ್ಟ್‌ನಲ್ಲಿ ಕೆವಿಟ್ ಹಾಕಿ ಹಲವು ರಾಜಕೀಯ ಒತ್ತಡದ ನಡುವೆಯೂ ಕಳೆದ ವಾರ 21 ಅಂಗಡಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿಸಿದ್ದರು.

ಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಅನಧಿಕೃತವಾಗಿಟ್ಟುಕೊಂಡಿದ್ದ ಮಳಿಗೆದಾರರು ಅಂಗಡಿಗಳನ್ನು ತೆರವು ಮಾಡದೆ ಇದ್ದಿದ್ದರಿಂದ ಇಂದು ಬೆಳಗ್ಗೆ ಪೊಲೀಸರು, ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಸಹಯೋಗದಲ್ಲಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಇದರಿಂದ ಕಳೆದ ಎಂಟು ವರ್ಷಗಳಿಂದ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ತೆರೆ ಬಿದ್ದಿದೆ.

ಕಳೆದ ಹಲವಾರು ವರ್ಷಗಳಿಂದ 21 ಮಳಿಗೆದಾರರು ಅನಧಿಕೃತವಾಗಿ ವ್ಯಾಪಾರ ಮಾಡುತ್ತಿದ್ದರು. ಇದರಿಂದ ಪ್ರಾಧಿಕಾರಕ್ಕೆ ನಷ್ಟ ಉಂಟಾಗಿದ್ದು, ಈ ಸಂಬಂಧ ಇದ್ದ ಸಮಸ್ಯೆಯನ್ನು ಬಗೆಹರಿಸಿ ಕಳೆದ ವಾರ 21 ಅಂಗಡಿಗಳನ್ನು 11 ತಿಂಗಳ ಅವಧಿಗೆ ೨.೩೪ ಕೋಟಿಗೆ ಹರಾಜು ಮಾಡಲಾಗಿದೆ. ಪ್ರಾಧಿಕಾರದ ಆಸ್ತಿ ಹಾಗೂ ಆದಾಯವನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಅದನ್ನು ನಿಭಾಯಿಸಿದ್ದೇನೆ ಎಂದು ಎಈ ರಘು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

3 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

3 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

3 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

3 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

3 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

3 hours ago