ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು ಎಕರೆ ಬಾಳೆ, ಟಮೋಟೊ ಗಿಡಗಳು ಸಂಪೂರ್ಣ ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಮಿಣ್ಯಂ ಗ್ರಾಮದಲ್ಲಿ ಜರುಗಿದೆ.
ಗುರುವಾರ ಮಧ್ಯಾಹ್ನ ಪ್ರಾರಂಭವಾದ ಬಿರುಗಾಳಿ ಸಹಿತ ಭಾರಿ ಮಳೆಗೆ ಮಾದೇಶ್, ಗೋವಿಂದೇಗೌಡ, ಪ್ರಭು, ನಾಗಮಲೆ, ಕೃಷ್ಣ, ಮುತ್ತುರಾಜುರವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಗಿಡಗಳು, ಸಿದ್ದಯ್ಯರವರ ಜಮೀನಿನಲ್ಲಿ ಬೆಳೆದಿದ್ದ ಟಮೋಟೋ ಬೆಳೆ ಸಹ ಉದುರಿ ನೆಲಕಚ್ಚಿದೆ. ಇದರಿಂದ ರೈತರು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ.
ಪ್ರಭುಸ್ವಾಮಿ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಗೊನೆ ಬಿಟ್ಟಿದ್ದ 700ಕ್ಕೂ ಹೆಚ್ಚು ಬಾಳೆಗಿಡಗಳು ಸಂಪೂರ್ಣವಾಗಿ ಬುಡ ಸಮೇತ ನೆಲ ಕಚ್ಚಿದೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು ರೈತ ಪ್ರಭುಸ್ವಾಮಿರವರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಸಂಕಷ್ಟದಲ್ಲಿ ರೈತ ಪ್ರಭುಸ್ವಾಮಿ: ಪ್ರಭುಸ್ವಾಮಿ ರವರು ಪ್ರತಿ ಬಾರಿಯೂ ಬಾಳೆ ಬೆಳೆಯನ್ನು ಬೆಳೆಯುತ್ತಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ ಸತತವಾಗಿ ಪ್ರಕೃತಿ ವಿಕೋಪಕ್ಕೆ ಬಾಳೆ ಗಿಡ ನೆಲಕಚ್ಚಿದೆ. ಇದರಿಂದ ಸಾಲ ತೀರಿಸಲಾಗದೆ ವಿಡಿಯೋನಲ್ಲಿ ತಮ್ಮ ಕಷ್ಟದ ಜೀವನದ ಬಗ್ಗೆ ಅಳಲನ್ನು ತೋಡಿಕೊಂಡಿದ್ದಾರೆ.
ಎರಡು ಬಾರಿಯೂ ಪರಿಹಾರ ದೊರೆತಿಲ್ಲ : ರೈತ ಪ್ರಭುಸ್ವಾಮಿರವರು ಕಷ್ಟಪಟ್ಟು ತಮ್ಮ ಜಮೀನಿನಲ್ಲಿ ಬಾಳೆ ಬೆಳೆಯುತ್ತಿದ್ದಾರೆ. ಒಂದು ಬಾರಿ ಆನೆ ದಾಳಿಯಿಂದ ಬಾಳೇ ಫಸಲು ನಾಶವಾದರೆ ಮತ್ತೊಮ್ಮೆ ಗಾಳಿ ಮಳೆಗೆ ಬಾಳೆಗೊನೆಗಳು ನೆಲಕ್ಕೆ ಕಚ್ಚಿತ್ತು. ಎರಡು ಬಾರಿ ಬಾಳೆಗೊನೆ ನಷ್ಟವಾಗಿದ್ದರು ಇದುವರೆಗೂ ಅಧಿಕಾರಿಗಳು ಇವರಿಗೆ ಪರಿಹಾರ ನೀಡಿಲ್ಲ ಇದೀಗ ಮತ್ತೊಮ್ಮೆ ಬಾಳಿಪಸಲು ಗಾಳಿ ಮಳೆಗೆ ಸಂಪೂರ್ಣ ನಾಶವಾಗಿ ಸಂಕಷ್ಟಕ್ಕೀಡಾಗಿದ್ದಾರೆ.
ವಿದ್ಯುತ್ ತಂತಿ ಮೇಲೆ ಮುರಿದು ಬಿದ್ದ ಮರ: ಗುರುವಾರ ಮಧ್ಯಾಹ್ನ ಬಿದ್ದ ಬಿರುಗಾಳಿ ಸಹಿತ ಮಳೆಗೆ ಮರ ಒಂದು ವಿದ್ಯುತ್ ಕಂಬದ ತಂತಿಯ ಮೇಲೆ ಬಿದ್ದು ವಿದ್ಯುತ್ ಸ್ಥಗಿತಗೊಂಡಿದೆ.
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…