ಚಾಮರಾಜನಗರ

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು ಎಕರೆ ಬಾಳೆ, ಟಮೋಟೊ ಗಿಡಗಳು ಸಂಪೂರ್ಣ ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಮಿಣ್ಯಂ ಗ್ರಾಮದಲ್ಲಿ ಜರುಗಿದೆ.

ಗುರುವಾರ ಮಧ್ಯಾಹ್ನ ಪ್ರಾರಂಭವಾದ ಬಿರುಗಾಳಿ ಸಹಿತ ಭಾರಿ ಮಳೆಗೆ ಮಾದೇಶ್, ಗೋವಿಂದೇಗೌಡ, ಪ್ರಭು, ನಾಗಮಲೆ, ಕೃಷ್ಣ, ಮುತ್ತುರಾಜುರವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಗಿಡಗಳು, ಸಿದ್ದಯ್ಯರವರ ಜಮೀನಿನಲ್ಲಿ ಬೆಳೆದಿದ್ದ ಟಮೋಟೋ ಬೆಳೆ ಸಹ ಉದುರಿ ನೆಲಕಚ್ಚಿದೆ. ಇದರಿಂದ ರೈತರು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ.

ಪ್ರಭುಸ್ವಾಮಿ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಗೊನೆ ಬಿಟ್ಟಿದ್ದ 700ಕ್ಕೂ ಹೆಚ್ಚು ಬಾಳೆಗಿಡಗಳು ಸಂಪೂರ್ಣವಾಗಿ ಬುಡ ಸಮೇತ ನೆಲ ಕಚ್ಚಿದೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು ರೈತ ಪ್ರಭುಸ್ವಾಮಿರವರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಸಂಕಷ್ಟದಲ್ಲಿ ರೈತ ಪ್ರಭುಸ್ವಾಮಿ: ಪ್ರಭುಸ್ವಾಮಿ ರವರು ಪ್ರತಿ ಬಾರಿಯೂ ಬಾಳೆ ಬೆಳೆಯನ್ನು ಬೆಳೆಯುತ್ತಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ ಸತತವಾಗಿ ಪ್ರಕೃತಿ ವಿಕೋಪಕ್ಕೆ ಬಾಳೆ ಗಿಡ ನೆಲಕಚ್ಚಿದೆ. ಇದರಿಂದ ಸಾಲ ತೀರಿಸಲಾಗದೆ ವಿಡಿಯೋನಲ್ಲಿ ತಮ್ಮ ಕಷ್ಟದ ಜೀವನದ ಬಗ್ಗೆ ಅಳಲನ್ನು ತೋಡಿಕೊಂಡಿದ್ದಾರೆ.

ಎರಡು ಬಾರಿಯೂ ಪರಿಹಾರ ದೊರೆತಿಲ್ಲ : ರೈತ ಪ್ರಭುಸ್ವಾಮಿರವರು ಕಷ್ಟಪಟ್ಟು ತಮ್ಮ ಜಮೀನಿನಲ್ಲಿ ಬಾಳೆ ಬೆಳೆಯುತ್ತಿದ್ದಾರೆ. ಒಂದು ಬಾರಿ ಆನೆ ದಾಳಿಯಿಂದ ಬಾಳೇ ಫಸಲು ನಾಶವಾದರೆ ಮತ್ತೊಮ್ಮೆ ಗಾಳಿ ಮಳೆಗೆ ಬಾಳೆಗೊನೆಗಳು ನೆಲಕ್ಕೆ ಕಚ್ಚಿತ್ತು. ಎರಡು ಬಾರಿ ಬಾಳೆಗೊನೆ ನಷ್ಟವಾಗಿದ್ದರು ಇದುವರೆಗೂ ಅಧಿಕಾರಿಗಳು ಇವರಿಗೆ ಪರಿಹಾರ ನೀಡಿಲ್ಲ ಇದೀಗ ಮತ್ತೊಮ್ಮೆ ಬಾಳಿಪಸಲು ಗಾಳಿ ಮಳೆಗೆ ಸಂಪೂರ್ಣ ನಾಶವಾಗಿ ಸಂಕಷ್ಟಕ್ಕೀಡಾಗಿದ್ದಾರೆ.

ವಿದ್ಯುತ್ ತಂತಿ ಮೇಲೆ ಮುರಿದು ಬಿದ್ದ ಮರ: ಗುರುವಾರ ಮಧ್ಯಾಹ್ನ ಬಿದ್ದ ಬಿರುಗಾಳಿ ಸಹಿತ ಮಳೆಗೆ ಮರ ಒಂದು ವಿದ್ಯುತ್ ಕಂಬದ ತಂತಿಯ ಮೇಲೆ ಬಿದ್ದು ವಿದ್ಯುತ್ ಸ್ಥಗಿತಗೊಂಡಿದೆ.

ಆಂದೋಲನ ಡೆಸ್ಕ್

Recent Posts

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

2 mins ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

11 mins ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

50 mins ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

1 hour ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

4 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

4 hours ago