ಚಾಮರಾಜನಗರ

ಹನೂರು: ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಕೆ.ಸಿ ಮಾದೇಶ ಆಯ್ಕೆ

ಹನೂರು: ಕೊಳ್ಳೇಗಾಲ, ಯಳಂದೂರು, ಹನೂರು ಹಾಗೂ ಕೊಳ್ಳೇಗಾಲ ತಾಲ್ಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕಂಡಯ್ಯನಪಾಳ್ಯ ಕೆ.ಸಿ.ಮಾದೇಶ್ , ಕಾರ್ಯದರ್ಶಿಯಾಗಿ ನಿವೃತ್ತ ಪಿಎಸ್ಐ ಸಿದ್ದಲಿಂಗೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು.

ಕೊಳ್ಳೇಗಾಲ ಪಟ್ಟಣದ ಜಿ.ವಿ.ಗೌಡ ಕಾಲೇಜುನಲ್ಲಿ ಇಂದು ಒಕ್ಕಲಿಗರ ಸಂಘದ ಗೌರವಧ್ಯಕ್ಷ ಮಾಜಿ ಶಾಸಕ ಆರ್.ನರೇಂದ್ರ ರಾಜೂಗೌಡರವರ ಅಧ್ಯಕ್ಷತೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕಂಡಯ್ಯನಪಾಳ್ಯ ಕೆ.ಸಿ.ಮಾದೇಶ್, ಉಪಾಧ್ಯಕ್ಷರಾಗಿ ಬನ್ನಿಸಾರಿಗೆ ಶಂಕರ್, ಗುಂಬಳ್ಳಿ ಸೋಮೇಶ್ ಹಾಗೂ ಕಾರ್ಯದರ್ಶಿಯಾಗಿ ನಿವೃತ್ತ ಪಿಎಸ್ಐ ಸಿದ್ದಲಿಂಗೇಗೌಡ ಅವರನ್ನು ಸಂಘದ ಸದಸ್ಯರು ಒಮ್ಮತದಿಂದ ಆಯ್ಕೆ ಮಾಡಿದರು.

ಬಳಿಕ ಸಂಘದ ಗೌರವಧ್ಯಕ್ಷ ಮತ್ತು ಮಾಜಿ ಶಾಸಕ ಆರ್.ನರೇಂದ್ರ ಮಾತನಾಡಿ, ಇಂದು ಒಕ್ಕಲಿಗರ ಸಂಘದ ಎಲ್ಲಾ ನಿರ್ದೇಶಕರ ಒಮ್ಮತ್ತದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದಾರೆ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಸಂಘವನ್ನು ಎಲ್ಲಾರು ಸೇರಿ ಉತ್ತಮ ರೀತಿಯಲ್ಲಿ ಅಭಿವೃದ್ಧಿಗೊಳಿಸೋಣ ಮುಂದಿನ ದಿನಗಳಲ್ಲಿ ಬಡ ಮಕ್ಕಳು ಹಾಗೂ ನಮ್ಮ ಜನಾಂಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಹ ಕೆಲಸವನ್ನು ಮಾಡಲು ಶ್ರಮಿಸಬೇಕು ಎಂದು ತಿಳಿಸಿದರು.

ಈ ಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷರು ಮತ್ತು ಹಾಲಿ ನಿರ್ದೇಶಕ ರಾಜೂಗೌಡ, ನಿರ್ದೇಶಕರುಗಳಾದ ಪ್ರಸನ್ನ ಎನ್ ತೆಳ್ಳನೂರು, ಸಿಂಗನಲ್ಲೂರು ಡಿ.ಕೃಷ್ಣೇಗೌಡ, ಸಿದ್ದೇಗೌಡ, ಶ್ರೀನಿವಾಸ.ಜಿ, ಕೆ.ಭಾಸ್ಕರ, ಮಾದೇಗೌಡ(ಶೇಖರ್), ಮಂಜೇಶ್.ಎಸ್, ಆನಂದ್ ಕುಮಾರ್, ಡಿ.ಸತೀಶ್, ಮಾದೇಶ್, ಕೆ.ನಾಗರಾಜು ಅರೇಪಾಳ್ಯ, ಸುಂದ್ರಪ್ಪ, ಮನು.ಎಂ, ಜೆ.ಬಸವರಾಜು, ಮಾಜಿ ಕಾರ್ಯದರ್ಶಿ ಬಸವೇಗೌಡ, ಮಾಜಿ ನಿರ್ದೇಶಕರು ನಾಗೇಂದ್ರ, ಸುಂದರ, ಶ್ರೀನಿವಾಸ್,ಕಾಳೇಗೌಡ್ರು, ತಾಲ್ಲೂಕು ಮಾಜಿ ಅಧ್ಯಕ್ಷ ಮತ್ತು ಚಾ.ನಗರ, ಮೈಸೂರು ಜಿಲ್ಲಾ ನಿರ್ದೇಶಕರು ಎ.ಕುಮಾರ್,
ಜಿಲ್ಲಾ ನಿರ್ದೇಶಕರು ರಾಜಣ್ಣ ಪಣ್ಯದಹುಂಡಿ, ಚಾ.ನಗರ ಒಕ್ಕಲಿಗರ ಅಧ್ಯಕ್ಷ ಪುಟ್ಟಸ್ವಾಮಿ ಗೌಡ ಹಾಗೂ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

45 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

46 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

49 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

51 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

58 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

1 hour ago