ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿನ ಇಂಡಿಗನತ್ತದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆಯು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.
ಮೂರನೇ ದಿನವೂ ಚಿರತೆ ಸೆರೆ ಕಾರ್ಯಾಚರಣೆ ಮುಂದುವರೆಸಿದ್ದು, ಚಿರತೆ ಸೆರೆ ಕಾರ್ಯಪಡೆ ಸೇರಿದಂತೆ 60ಕ್ಕೂ ಹೆಚ್ಚು ಸಿಬ್ಬಂದಿಯಿಂದ ಶೋಧಕಾರ್ಯ ಮುಂದುವರೆದಿದೆ. ಡ್ರೋಣ್ ಹಾಗೂ ಥರ್ಮಲ್ ಡ್ರೋಣ್ ಮೂಲಕ ಚಿರತೆ ಹುಡುಕಾಟ ಮುಂದುವರೆದಿದ್ದು, ಕ್ಯಾಮರಾ ಟ್ರ್ಯಾಪ್ನಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ.
ಬೆಳಗಿನ ಜಾವ ಕ್ಯಾಮರಾ ಟ್ರ್ಯಾಪ್ನಲ್ಲಿ ಚಿರತೆ ದೃಶ್ಯ ಸೆರೆ ಸಿಕ್ಕಿದ್ದು, ಸದ್ಯ ಚಿರತೆ ಸೆರೆಗೆ ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
ವಿವಿಧ ಮಾದರಿಯ ಬೋನುಗಳನ್ನು ಆಯಕಟ್ಟಿನ ಸ್ಥಳದಲ್ಲಿ ಇರಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…