ಚಾಮರಾಜನಗರ

ಹನೂರಿನಲ್ಲಿ ಕಳ್ಳತನ ಪ್ರಕರಣ: ಚಿನ್ನದೊರೆ ನಿವಾಸಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ

ಹನೂರು: ಪಟ್ಟಣದ ಚಿನ್ನದೊರೆ ಎಂಬುವವರ ಮನೆಯಲ್ಲಿ ನಗದು ಹಾಗೂ ಚಿನ್ನ ಕಳ್ಳತನವಾಗಿದ್ದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಅವರು, ಚಿನ್ನದೊರೆ ನಿವಾಸಕ್ಕೆ ಭೇಟಿ ನೀಡಿ ಘಟನೆಯ ಸಂಬಂಧ ಮಾಹಿತಿ ಪಡೆದುಕೊಂಡು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಪರಿಶೀಲನೆ ನಂತರ ಆರ್.ನರೇಂದ್ರ ಅವರು, ದೂರವಾಣಿ ಮುಖಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾರನ್ನು ಸಂಪರ್ಕಿಸಿ ತನಿಖೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿಯೇ ಇದುವರೆಗೂ ಇಷ್ಟು ದೊಡ್ಡ ಮಟ್ಟದಲ್ಲಿ ಕಳ್ಳತನವಾಗಿರಲಿಲ್ಲ. ಇದೀಗ ಹನೂರು ಪಟ್ಟಣದಲ್ಲಿ ಕಳ್ಳತನ ನಡೆದಿರುವುದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಈಗಾಗಲೇ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕಳ್ಳತನ ಪ್ರಕರಣವನ್ನು ಆದಷ್ಟು ಬೇಗ ಭೇದಿಸಿ ನಗದು ಹಾಗೂ ಚಿನ್ನವನ್ನು ಪತ್ತೆ ಹಚ್ಚುವಂತೆ ತಿಳಿಸಿದ್ದೇನೆ. ಈ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಈಗಾಗಲೇ ವಿಶೇಷ ತಂಡ ರಚನೆಯಾಗಿರುವುದು ತಿಳಿದು ಬಂದಿದೆ. ನಮ್ಮ ರಾಜ್ಯದ ಪೊಲೀಸರು ಇದಕ್ಕಿಂತಲೂ ವಿಭಿನ್ನವಾಗಿರುವ ಪ್ರಕರಣಗಳನ್ನು ಭೇದಿಸಿ ಇಡೀ ದೇಶದಲ್ಲಿಯೇ ಮನೆ ಮಾತಾಗಿದ್ದಾರೆ. ಈ ಪ್ರಕರಣವು ಸುಖಾಂತ್ಯ ಕಂಡು ನೊಂದವರಿಗೆ ನ್ಯಾಯ ಕೊಡಿಸುವ ಮೂಲಕ ರಾಜ್ಯದ ಪೊಲೀಸರು ಇತರೆ ರಾಜ್ಯದವರಿಗೆ ಮಾದರಿಯಾಗಲಿ ಎಂದರು.

ಘಟನೆಯ ಸಂಬಂಧ ಚಿನ್ನದೊರೆ ಮಾತನಾಡಿ, ನನ್ನ ಮೂರನೇ ಮಗಳು ದರ್ಶಿನಿ ರಾಜಸ್ಥಾನದ ಜೈಪುರ್‌ನಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಬರುವ ಸಂಬಳವನ್ನು ನಮಗೆ ಕಳುಹಿಸುತ್ತಿದ್ದರು. ನಾವು ನಮ್ಮ ಊರಿನಲ್ಲಿದ್ದ ಜಮೀನು ಮಾರಾಟ ಮಾಡಿ ಮನೆಯಲ್ಲಿ 20 ಲಕ್ಷ ನಗದು ಹಾಗೂ ಮದುವೆಗೆ ಚಿನ್ನ ಖರೀದಿ ಮಾಡಿ ಮನೆಯಲ್ಲಿ ಇಟ್ಟಿದ್ದೆವು. ನಮ್ಮ ಸಂಬಂಧಿಕರ ಕಾರ್ಯಕ್ರಮ ಇದ್ದ ಹಿನ್ನೆಲೆ ತಮಿಳುನಾಡಿಗೆ ತೆರಳಿ ವಾಪಸ್ ಮಧ್ಯರಾತ್ರಿ ಮನೆಗೆ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂತು ಎಂದು ಘಟನೆ ಬಗ್ಗೆ ವಿವರಿಸಿದರು.

ಭೇಟಿಯ ವೇಳೆ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಾದೇಶ್, ಮುಖಂಡರಾದ ರಮೇಶ್ ನಾಯ್ಡು, ಮಾದೇಶ್, ರಾಜೇಶ್, ಪ್ರದೀಪ್ ನಾಯ್ಡು, ನಾಗೇಶ್, ವೆಂಕಟೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago