ಚಾಮರಾಜನಗರ

ಹನೂರಿನಲ್ಲಿ ಕಳ್ಳತನ ಪ್ರಕರಣ: ಚಿನ್ನದೊರೆ ನಿವಾಸಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ

ಹನೂರು: ಪಟ್ಟಣದ ಚಿನ್ನದೊರೆ ಎಂಬುವವರ ಮನೆಯಲ್ಲಿ ನಗದು ಹಾಗೂ ಚಿನ್ನ ಕಳ್ಳತನವಾಗಿದ್ದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಅವರು, ಚಿನ್ನದೊರೆ ನಿವಾಸಕ್ಕೆ ಭೇಟಿ ನೀಡಿ ಘಟನೆಯ ಸಂಬಂಧ ಮಾಹಿತಿ ಪಡೆದುಕೊಂಡು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಪರಿಶೀಲನೆ ನಂತರ ಆರ್.ನರೇಂದ್ರ ಅವರು, ದೂರವಾಣಿ ಮುಖಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾರನ್ನು ಸಂಪರ್ಕಿಸಿ ತನಿಖೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿಯೇ ಇದುವರೆಗೂ ಇಷ್ಟು ದೊಡ್ಡ ಮಟ್ಟದಲ್ಲಿ ಕಳ್ಳತನವಾಗಿರಲಿಲ್ಲ. ಇದೀಗ ಹನೂರು ಪಟ್ಟಣದಲ್ಲಿ ಕಳ್ಳತನ ನಡೆದಿರುವುದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಈಗಾಗಲೇ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕಳ್ಳತನ ಪ್ರಕರಣವನ್ನು ಆದಷ್ಟು ಬೇಗ ಭೇದಿಸಿ ನಗದು ಹಾಗೂ ಚಿನ್ನವನ್ನು ಪತ್ತೆ ಹಚ್ಚುವಂತೆ ತಿಳಿಸಿದ್ದೇನೆ. ಈ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಈಗಾಗಲೇ ವಿಶೇಷ ತಂಡ ರಚನೆಯಾಗಿರುವುದು ತಿಳಿದು ಬಂದಿದೆ. ನಮ್ಮ ರಾಜ್ಯದ ಪೊಲೀಸರು ಇದಕ್ಕಿಂತಲೂ ವಿಭಿನ್ನವಾಗಿರುವ ಪ್ರಕರಣಗಳನ್ನು ಭೇದಿಸಿ ಇಡೀ ದೇಶದಲ್ಲಿಯೇ ಮನೆ ಮಾತಾಗಿದ್ದಾರೆ. ಈ ಪ್ರಕರಣವು ಸುಖಾಂತ್ಯ ಕಂಡು ನೊಂದವರಿಗೆ ನ್ಯಾಯ ಕೊಡಿಸುವ ಮೂಲಕ ರಾಜ್ಯದ ಪೊಲೀಸರು ಇತರೆ ರಾಜ್ಯದವರಿಗೆ ಮಾದರಿಯಾಗಲಿ ಎಂದರು.

ಘಟನೆಯ ಸಂಬಂಧ ಚಿನ್ನದೊರೆ ಮಾತನಾಡಿ, ನನ್ನ ಮೂರನೇ ಮಗಳು ದರ್ಶಿನಿ ರಾಜಸ್ಥಾನದ ಜೈಪುರ್‌ನಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಬರುವ ಸಂಬಳವನ್ನು ನಮಗೆ ಕಳುಹಿಸುತ್ತಿದ್ದರು. ನಾವು ನಮ್ಮ ಊರಿನಲ್ಲಿದ್ದ ಜಮೀನು ಮಾರಾಟ ಮಾಡಿ ಮನೆಯಲ್ಲಿ 20 ಲಕ್ಷ ನಗದು ಹಾಗೂ ಮದುವೆಗೆ ಚಿನ್ನ ಖರೀದಿ ಮಾಡಿ ಮನೆಯಲ್ಲಿ ಇಟ್ಟಿದ್ದೆವು. ನಮ್ಮ ಸಂಬಂಧಿಕರ ಕಾರ್ಯಕ್ರಮ ಇದ್ದ ಹಿನ್ನೆಲೆ ತಮಿಳುನಾಡಿಗೆ ತೆರಳಿ ವಾಪಸ್ ಮಧ್ಯರಾತ್ರಿ ಮನೆಗೆ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂತು ಎಂದು ಘಟನೆ ಬಗ್ಗೆ ವಿವರಿಸಿದರು.

ಭೇಟಿಯ ವೇಳೆ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಾದೇಶ್, ಮುಖಂಡರಾದ ರಮೇಶ್ ನಾಯ್ಡು, ಮಾದೇಶ್, ರಾಜೇಶ್, ಪ್ರದೀಪ್ ನಾಯ್ಡು, ನಾಗೇಶ್, ವೆಂಕಟೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago